Homeಮುಖಪುಟಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಆತಂಕದಲ್ಲಿರುವ ಮಹಿಳೆಯರು ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಕ್ಯಾಮರಗಳ ಸಹಾಯದಿಂದ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ...

- Advertisement -
- Advertisement -

ಉತ್ತರ ಪ್ರದೇಶ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಅಪರಾಧಗಳು ನಡೆಯುವ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಹಲ್ಲೆ, ಕೊಲೆ, ಹಿಂಸಾಚಾರಕ್ಕೆ ಕುಖ್ಯಾತಿಯಾದ ರಾಜ್ಯವಾಗಿದೆ. ಅಲ್ಲಿನ ಸರ್ಕಾರವಾಗಲಿ, ಪೊಲೀಸ್ ವ್ಯವಸ್ಥೆಯಾಗಲಿ ಅಪರಾಧ ತಡೆಗೆ ಪ್ರಾಮಾಣಿಕ ಪಯತ್ನ ಮಾಡುತ್ತಿಲ್ಲ ಎಂಬ ಆರೋಪವಿದೆ. ಇಂತಹ ರಾಜ್ಯದ ರಾಜಧಾನಿ ಲಕ್ನೋದಲ್ಲಿನ ಮಹಿಳೆಯರ ಮೇಲಿನ ಅಪರಾಧಗಳ ತಡೆಗೆ ಪೊಲೀಸರು ಕ್ಯಾಮರಗಳ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಸ್ಥಳಗಳನ್ನು ಎಐ-ಸಾಮರ್ಥ್ಯವುಳ್ಳ ಕ್ಯಾಮೆರಾಗಳೊಂದಿಗೆ ಸಜ್ಜುಗೊಳಿಸಲು ಲಕ್ನೋ ಪೊಲೀಸರು ಸಜ್ಜಾಗಿದ್ದಾರೆ. ಆ ಕ್ಯಾಮರಗಳು ಮುಖದ ಅಭಿವ್ಯಕ್ತಿಗಳ ಆಧಾರದ ಮೇಲೆ ತೊಂದರೆಯಲ್ಲಿರುವ ಮಹಿಳೆಯರ ಚಿತ್ರಗಳನ್ನು ಕ್ಲಿಕ್ ಮಾಡುತ್ತದೆ ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಎಚ್ಚರಿಕೆ ನೀಡುತ್ತದೆ ಎಂದು ಪೊಲೀಸ್ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾರ್ವಜನಿಕ ಸ್ಥಳದಲ್ಲಿ ಹುಡುಗಿಯರು ತಮ್ಮ ಮುಖಭಾವನೆಗಳನ್ನು ಬದಲಿಸಿದ ಕೂಡಲೇ “ಅವರನ್ನು ಯಾರೋ ಹಿಂಬಾಲಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ ಅಥವಾ ಚುಡಾಯಿಸುತ್ತಿದ್ದಾರೆ” ಎಂಬುದನ್ನು ಗುರುತಿಸುವ ಕ್ಯಾಮರಗಳು ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಬಂಧಿಸಲು ಸಹಾಯ ಮಾಡುತ್ತವೆ ಎಂದು ಪೊಲೀಸ್ ಕಮಿಷನರ್ ಡಿಕೆ ಠಾಕೂರ್ ತಿಳಿಸಿದ್ದಾರೆ.

ಜಿಲ್ಲೆಯ ಸುರಕ್ಷತೆಯ ವಿಷಯವಾಗಿ “ಆಶಿಶ್, ಅಭಯ್ ಮತ್ತು ಅಭ್ಯುದಯ” ಎಂಬ ಕಾರ್ಯಗಾರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹೆಚ್ಚಾಗಿ ಮಹಿಳೆಯರು ಓಡಾಡುವ ಮತ್ತು ಅಪರಾಧಗಳು ದಾಖಲಾಗಿರುವ 200 ಸ್ಥಳಗಳನ್ನು ಗುರುತಿಸಿದ್ದೇವೆ’ ಎಂದಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಐ-ಸಾಮರ್ಥ್ಯವುಳ್ಳ ಕ್ಯಾಮರಗಳನ್ನು ಅಳವಡಿಸುತ್ತಿದ್ದೇವೆ. ಇವು ತ್ವರಿತವಾಗಿ ಪೊಲೀಸ್ ಠಾಣೆಗಳಿಗೆ ಮಾಹಿತಿ ಒದಗಿಸುತ್ತವೆ. ಯಾವುದೇ ಮಹಿಳೆಯರು ಆತಂಕಿತ ಸ್ಥಿತಿಯಲ್ಲಿದ್ದರೆ ಅವರ ಮುಖಭಾವನೆಗಳನ್ನು ಆಧರಿಸಿ ಆ ಮಾಹಿತಿಯನ್ನು ವೇಗವಾಗಿ ಪೊಲೀಸ್ ಠಾಣೆಗಳಿಗೆ ಕಳಿಸುತ್ತದೆ. ಆಕೆ ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ ಎಂದು ಡಿಕೆ ಠಾಕೂರ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಲಕ್ನೋ ನಗರ ಮಾತ್ರವೇ ದೇಶದ ಮಹಿಳಾ ಸುರಕ್ಷತಾ ನಗರವೆಂದು ಸೇರ್ಪಡೆಗೊಂಡಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಲ್ಲಿ 31 ಪಿಂಕ್ ಬೂತ್‌ಗಳು, 10 ಸಂಚಾರಿ ಪೊಲೀಸ್ ವಾಹನಗಳು, ಮಹಿಲಾ ಕಾನ್ಸ್ಟೇಬಲ್‌ಗಳನ್ನೊಳಗೊಂಡ 100 ಸ್ಕೂಟಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.

ಲಕ್ನೋ ಪೊಲೀಸರ ಈ ಹೊಸ ಕ್ಯಾಮರ ಅವತಾರವನ್ನು ಮಹಿಳೆಯರು ಹೇಗೆ ಸ್ವೀಕರಿಸುತ್ತಾರೆ ನೋಡಬೇಕಿದೆ. ಏಕೆಂದರೆ ಮಹಿಳೆಯರು ಯಾವ ವಿಷಯಕ್ಕೆ ಬೇಕಾದರೂ ಆತಂಕಗೊಳ್ಳಬಹುದು. ಅದೆಲ್ಲವೂ ಪೊಲೀಸರಿಗೆ ತಿಳಿಯಬೇಕೆ? ಮಹಿಳೆಯರಿಗೆ ಖಾಸಗಿತನವೆಂಬುದಿಲ್ಲವೇ? ಅನವಶ್ಯಕವಾಗಿ ಪೊಲೀಸರು ಮೂಗು ತೂರಿಸಿದಂತಾಗುವುದಿಲ್ಲವೇ? ಎಂಬ ಪ್ರಶ್ನೆಗಳು ಎದ್ದಿವೆ.

ಇದುವರೆಗೂ ಮಹಿಳೆಯರು ನೀಡಿದ ದೂರುಗಳಲ್ಲಿ ಎಷ್ಟನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ? ಆ ದೂರುಗಳಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಪೊಲೀಸರು ತಾವು ಮಾಡಬೇಕಾದ ಕರ್ತವ್ಯಗಳನ್ನು ಮರೆತು ಕ್ಯಾಮರ ಮೊರೆ ಹೋಗುವುದು ಸರಿಯಲ್ಲ ಎಂದು ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿವೆ.


ಇದನ್ನೂ ಓದಿ; ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ- ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...