Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...