Homeಕರ್ನಾಟಕಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ.

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿ ಬೀದಿಪಾಲು ಮಾಡಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಕೆ. ಮರಿಯಪ್ಪನವರು ಆರೋಪಿಸಿದ್ದಾರೆ.

ಇಂದಿರಾ ನಗರದ NGEF ಫ್ಯಾಕ್ಟರಿ ಹತ್ತಿರ ಕಳೆದ 30 ವರ್ಷಗಳಿಂದಲೂ ಕೂಲಿ ಮಾಡುವ 450 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದರು. ಇತ್ತೀಚೆಗೆ ಅವರಲ್ಲಿ 303 ಕುಟುಂಬಗಳಿಗೆ ಮಾರತ್ತಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಮನೆ ವ್ಯವಸ್ಥೆ ಮಾಡಲಾಗಿದೆ. ಉಳಿದ 86 ಕುಟುಂಬಗಳು ಸಹ ಅಲ್ಲಿಯೇ ವಾಸಿಸುತ್ತಿದ್ದು, ಅವರ ಬಳಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಒಳಗೊಂಡಂತೆ ಎಲ್ಲಾ ದಾಖಲಾತಿಗಿಳಿದ್ದರೂ ಸಹ ಅವರಿಗೆ ಮನೆ ವ್ಯವಸ್ಥೆ ಮಾಡಿಕೊಡಬೇಕೆಂದು ಕಳೆದ 2 ವರ್ಷಗಳಿಂದ ಹೋರಾಡುತ್ತಿದ್ದೇವೆ. ಸ್ಲಂ ಬೋರ್ಡ್, ಕಂದಾಯ ಅಧಿಕಾರಿಗಳಿಗೆ ಹತ್ತಾರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

ನಿನ್ನೆ ತಾನೇ ವಿಶೇ‍ಷ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಬಡ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದೆವು. ಪುನರ್ವಸತಿ ವ್ಯವಸ್ಥೇ ಮಾಡಬೇಕೆಂದು ಅವರು ತಹಶೀಲ್ದಾರ್‌ರವರಿಗೆ ಸೂಚಿಸಿದರೂ ಸಹ ತಹಶೀಲ್ದಾರ್‌ರವರು ಅದಕ್ಕೆ ಸಿದ್ದರಿಲ್ಲ. ಹಾಗಾಗಿ ಇಂದು ಏಕಾಏಕಿ ಆ 86 ಕುಟುಂಬಗಳನ್ನು ಸಹ ಒಕ್ಕಲೆಬ್ಬಿಸಲಾಗಿದೆ. ಮನೆ ಕಳೆದುಕೊಂಡ ಆ ಕುಟುಂಬಗಳು ಪರ್ಯಾಯ ವ್ಯವಸ್ಥೆ ಇಲ್ಲದೆ ಬೀದಿಗೆ ಬಿದ್ದಿದ್ದಾರೆ. ಚಳಿಗಾಳಿಯಲ್ಲಿ ನಲುಗಿತ್ತಿದ್ದಾರೆ, ಕೂಡಲೇ ಪುನರ್ವಸತಿ ವ್ಯವಸ್ಥೆ ಮಾಡಬೇಕೆಂದು ಮರಿಯಪ್ಪ ಒತ್ತಾಯಿಸಿದ್ದಾರೆ.

ನಾವು 30 ವರ್ಷಗಳಿಂದ ಒಟ್ಟಿಗೆ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ಓಟು ಕೂಡ ಹಾಕಿದ್ದೇವೆ. ಆದರೆ ಅರ್ಧ ಜನಕ್ಕೆ ಮಾತ್ರ ಮನೆ ಕೊಟ್ಟು ಇನ್ನರ್ಧ ಜನಕ್ಕೆ ಮೋಸ ಮಾಡಲಾಗಿದೆ. ಇಂದು ಬೆಳಿಗ್ಗೆ ಪೊಲೀಸರು ಬಂದು ನಮ್ಮ ಮನೆಗಳನ್ನು ಒಡೆದುಹಾಕಿದ್ದಾರೆ. ನಮಗೆ ಬೇರೆ ಯಾವುದೇ ಮನೆ ಇಲ್ಲ, ಅಲ್ಲಿ ಇರಲು ಪೊಲೀಸರು ಬಿಡುತ್ತಿಲ್ಲ ನಾವೇನು ಮಾಡಬೇಕು ಎಂದು ಅಲ್ಲಿನ ನಿವಾಸಿಗಳು ತಮ್ಮ ಗೋಳು ಹೊರಹಾಕಿದ್ದಾರೆ.

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ. ತಹಶೀಲ್ದಾರ್ ನಮಗೆ ನ್ಯಾಯ ಕೊಡಿಸುವವರೆಗೂ ನಾವು ಇಲ್ಲೇ ಇರುತ್ತೇವೆ, ಇಲ್ಲೇ ಮಲಗುತ್ತೇವೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...