Homeಕರ್ನಾಟಕಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ.

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿ ಬೀದಿಪಾಲು ಮಾಡಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಕೆ. ಮರಿಯಪ್ಪನವರು ಆರೋಪಿಸಿದ್ದಾರೆ.

ಇಂದಿರಾ ನಗರದ NGEF ಫ್ಯಾಕ್ಟರಿ ಹತ್ತಿರ ಕಳೆದ 30 ವರ್ಷಗಳಿಂದಲೂ ಕೂಲಿ ಮಾಡುವ 450 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದರು. ಇತ್ತೀಚೆಗೆ ಅವರಲ್ಲಿ 303 ಕುಟುಂಬಗಳಿಗೆ ಮಾರತ್ತಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಮನೆ ವ್ಯವಸ್ಥೆ ಮಾಡಲಾಗಿದೆ. ಉಳಿದ 86 ಕುಟುಂಬಗಳು ಸಹ ಅಲ್ಲಿಯೇ ವಾಸಿಸುತ್ತಿದ್ದು, ಅವರ ಬಳಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಒಳಗೊಂಡಂತೆ ಎಲ್ಲಾ ದಾಖಲಾತಿಗಿಳಿದ್ದರೂ ಸಹ ಅವರಿಗೆ ಮನೆ ವ್ಯವಸ್ಥೆ ಮಾಡಿಕೊಡಬೇಕೆಂದು ಕಳೆದ 2 ವರ್ಷಗಳಿಂದ ಹೋರಾಡುತ್ತಿದ್ದೇವೆ. ಸ್ಲಂ ಬೋರ್ಡ್, ಕಂದಾಯ ಅಧಿಕಾರಿಗಳಿಗೆ ಹತ್ತಾರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

ನಿನ್ನೆ ತಾನೇ ವಿಶೇ‍ಷ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಬಡ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದೆವು. ಪುನರ್ವಸತಿ ವ್ಯವಸ್ಥೇ ಮಾಡಬೇಕೆಂದು ಅವರು ತಹಶೀಲ್ದಾರ್‌ರವರಿಗೆ ಸೂಚಿಸಿದರೂ ಸಹ ತಹಶೀಲ್ದಾರ್‌ರವರು ಅದಕ್ಕೆ ಸಿದ್ದರಿಲ್ಲ. ಹಾಗಾಗಿ ಇಂದು ಏಕಾಏಕಿ ಆ 86 ಕುಟುಂಬಗಳನ್ನು ಸಹ ಒಕ್ಕಲೆಬ್ಬಿಸಲಾಗಿದೆ. ಮನೆ ಕಳೆದುಕೊಂಡ ಆ ಕುಟುಂಬಗಳು ಪರ್ಯಾಯ ವ್ಯವಸ್ಥೆ ಇಲ್ಲದೆ ಬೀದಿಗೆ ಬಿದ್ದಿದ್ದಾರೆ. ಚಳಿಗಾಳಿಯಲ್ಲಿ ನಲುಗಿತ್ತಿದ್ದಾರೆ, ಕೂಡಲೇ ಪುನರ್ವಸತಿ ವ್ಯವಸ್ಥೆ ಮಾಡಬೇಕೆಂದು ಮರಿಯಪ್ಪ ಒತ್ತಾಯಿಸಿದ್ದಾರೆ.

ನಾವು 30 ವರ್ಷಗಳಿಂದ ಒಟ್ಟಿಗೆ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ಓಟು ಕೂಡ ಹಾಕಿದ್ದೇವೆ. ಆದರೆ ಅರ್ಧ ಜನಕ್ಕೆ ಮಾತ್ರ ಮನೆ ಕೊಟ್ಟು ಇನ್ನರ್ಧ ಜನಕ್ಕೆ ಮೋಸ ಮಾಡಲಾಗಿದೆ. ಇಂದು ಬೆಳಿಗ್ಗೆ ಪೊಲೀಸರು ಬಂದು ನಮ್ಮ ಮನೆಗಳನ್ನು ಒಡೆದುಹಾಕಿದ್ದಾರೆ. ನಮಗೆ ಬೇರೆ ಯಾವುದೇ ಮನೆ ಇಲ್ಲ, ಅಲ್ಲಿ ಇರಲು ಪೊಲೀಸರು ಬಿಡುತ್ತಿಲ್ಲ ನಾವೇನು ಮಾಡಬೇಕು ಎಂದು ಅಲ್ಲಿನ ನಿವಾಸಿಗಳು ತಮ್ಮ ಗೋಳು ಹೊರಹಾಕಿದ್ದಾರೆ.

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ. ತಹಶೀಲ್ದಾರ್ ನಮಗೆ ನ್ಯಾಯ ಕೊಡಿಸುವವರೆಗೂ ನಾವು ಇಲ್ಲೇ ಇರುತ್ತೇವೆ, ಇಲ್ಲೇ ಮಲಗುತ್ತೇವೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...