Homeಕರ್ನಾಟಕಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ.

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿ ಬೀದಿಪಾಲು ಮಾಡಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಕೆ. ಮರಿಯಪ್ಪನವರು ಆರೋಪಿಸಿದ್ದಾರೆ.

ಇಂದಿರಾ ನಗರದ NGEF ಫ್ಯಾಕ್ಟರಿ ಹತ್ತಿರ ಕಳೆದ 30 ವರ್ಷಗಳಿಂದಲೂ ಕೂಲಿ ಮಾಡುವ 450 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದರು. ಇತ್ತೀಚೆಗೆ ಅವರಲ್ಲಿ 303 ಕುಟುಂಬಗಳಿಗೆ ಮಾರತ್ತಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಮನೆ ವ್ಯವಸ್ಥೆ ಮಾಡಲಾಗಿದೆ. ಉಳಿದ 86 ಕುಟುಂಬಗಳು ಸಹ ಅಲ್ಲಿಯೇ ವಾಸಿಸುತ್ತಿದ್ದು, ಅವರ ಬಳಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಒಳಗೊಂಡಂತೆ ಎಲ್ಲಾ ದಾಖಲಾತಿಗಿಳಿದ್ದರೂ ಸಹ ಅವರಿಗೆ ಮನೆ ವ್ಯವಸ್ಥೆ ಮಾಡಿಕೊಡಬೇಕೆಂದು ಕಳೆದ 2 ವರ್ಷಗಳಿಂದ ಹೋರಾಡುತ್ತಿದ್ದೇವೆ. ಸ್ಲಂ ಬೋರ್ಡ್, ಕಂದಾಯ ಅಧಿಕಾರಿಗಳಿಗೆ ಹತ್ತಾರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

ನಿನ್ನೆ ತಾನೇ ವಿಶೇ‍ಷ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಬಡ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದೆವು. ಪುನರ್ವಸತಿ ವ್ಯವಸ್ಥೇ ಮಾಡಬೇಕೆಂದು ಅವರು ತಹಶೀಲ್ದಾರ್‌ರವರಿಗೆ ಸೂಚಿಸಿದರೂ ಸಹ ತಹಶೀಲ್ದಾರ್‌ರವರು ಅದಕ್ಕೆ ಸಿದ್ದರಿಲ್ಲ. ಹಾಗಾಗಿ ಇಂದು ಏಕಾಏಕಿ ಆ 86 ಕುಟುಂಬಗಳನ್ನು ಸಹ ಒಕ್ಕಲೆಬ್ಬಿಸಲಾಗಿದೆ. ಮನೆ ಕಳೆದುಕೊಂಡ ಆ ಕುಟುಂಬಗಳು ಪರ್ಯಾಯ ವ್ಯವಸ್ಥೆ ಇಲ್ಲದೆ ಬೀದಿಗೆ ಬಿದ್ದಿದ್ದಾರೆ. ಚಳಿಗಾಳಿಯಲ್ಲಿ ನಲುಗಿತ್ತಿದ್ದಾರೆ, ಕೂಡಲೇ ಪುನರ್ವಸತಿ ವ್ಯವಸ್ಥೆ ಮಾಡಬೇಕೆಂದು ಮರಿಯಪ್ಪ ಒತ್ತಾಯಿಸಿದ್ದಾರೆ.

ನಾವು 30 ವರ್ಷಗಳಿಂದ ಒಟ್ಟಿಗೆ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ಓಟು ಕೂಡ ಹಾಕಿದ್ದೇವೆ. ಆದರೆ ಅರ್ಧ ಜನಕ್ಕೆ ಮಾತ್ರ ಮನೆ ಕೊಟ್ಟು ಇನ್ನರ್ಧ ಜನಕ್ಕೆ ಮೋಸ ಮಾಡಲಾಗಿದೆ. ಇಂದು ಬೆಳಿಗ್ಗೆ ಪೊಲೀಸರು ಬಂದು ನಮ್ಮ ಮನೆಗಳನ್ನು ಒಡೆದುಹಾಕಿದ್ದಾರೆ. ನಮಗೆ ಬೇರೆ ಯಾವುದೇ ಮನೆ ಇಲ್ಲ, ಅಲ್ಲಿ ಇರಲು ಪೊಲೀಸರು ಬಿಡುತ್ತಿಲ್ಲ ನಾವೇನು ಮಾಡಬೇಕು ಎಂದು ಅಲ್ಲಿನ ನಿವಾಸಿಗಳು ತಮ್ಮ ಗೋಳು ಹೊರಹಾಕಿದ್ದಾರೆ.

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ. ತಹಶೀಲ್ದಾರ್ ನಮಗೆ ನ್ಯಾಯ ಕೊಡಿಸುವವರೆಗೂ ನಾವು ಇಲ್ಲೇ ಇರುತ್ತೇವೆ, ಇಲ್ಲೇ ಮಲಗುತ್ತೇವೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...