Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...