Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...