Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...