Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...