Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...