Homeಅಂತರಾಷ್ಟ್ರೀಯ'ನೋಡಲು ತುಂಬಾ ಚೆನ್ನಾಗಿದೆ': ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

‘ನೋಡಲು ತುಂಬಾ ಚೆನ್ನಾಗಿದೆ’: ಮತ್ತೆ ಟ್ರಂಪ್ ಕಾಲೆಳೆದ ಗ್ರೇಟಾ ಥನ್ಬರ್ಗ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ.

- Advertisement -
- Advertisement -

ಅಮೆರಿಕಾದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಡಳಿತಾವಧಿ ನಿನ್ನೆಗೆ ಕೊನೆಗೊಂಡಿದೆ. ಮತ ಎಣಿಕೆಯಲ್ಲಿ ಮೋಸ ನಡೆದಿದೆಯೆಂದು ಆರೋಪಿಸಿದ್ದ ಟ್ರಂಪ್, ತನ್ನ ಬೆಂಬಲಿಗರು ಕ್ಯಾಪಿಟಲ್ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂಬ ವಿಚಾರಣೆಯನ್ನೂ ಸಹ ಎದುರಿಸುತ್ತಿದ್ದಾರೆ. ಟ್ರಂಪ್ ನಿರ್ಗಮನದ ನಂತರ ವಿಶ್ವದ ಬಹುತೇಕ ನಾಯಕರು ಟ್ರಂಪ್ ಆಡಳಿತದ ವಿರುದ್ಧ ಕಿಡಿಕಾರುತ್ತಿದ್ದಾರೆ. ಆ ಟೀಕಾಕಾರರ ಸಾಲಿಗೆ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಕೂಡ ಸೇರಿಕೊಂಡಿದ್ದಾರೆ.

ಟ್ರಂಪ್ ಹೆಲಿಕ್ಯಾಪ್ಟರ್ ಹತ್ತಿ ನಿರ್ಗಮಿಸುತ್ತಿರುವ ಫೋಟೊವನ್ನು ಟ್ವೀಟ್ ಮಾಡಿದರು ಗ್ರೇಟಾ, “ಅವರು ಉಜ್ವಲ ಮತ್ತು ಅದ್ಭುತ ಭವಿಷ್ಯವನ್ನು ಎದುರು ನೋಡುತ್ತಿರುವ ಬಹಳ ಸಂತೋಷದ ಮುದುಕನಂತೆ ಕಾಣುತ್ತಾರೆ. ನೋಡಲು ತುಂಬಾ ಚೆನ್ನಾಗಿದೆ!” ಎಂದು ಬರೆದಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಗ್ರೇಟಾ ಥನ್ಬರ್ಗ್ ಡೋನಾಲ್ಡ್ ಟ್ರಂಪ್‌ರವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡು ತಿಂಗಳ ಹಿಂದೆ ಮತ ಎಣಿಕೆಯ ವೇಳೆ ಟ್ರಂಪ್ ಸೋಲಿನ ಸನಿಹದಲ್ಲಿದ್ದಾಗ ವರ್ಷದ ಹಿಂದೆ ಟ್ರಂಪ್‌ ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ ಭರ್ಜರಿ ಟ್ರೋಲ್ ಮಾಡಿದ್ದರು.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಅಂದು ಟ್ವೀಟ್ ಮಾಡಿದ್ದಳು.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು. “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು.

ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದರೆ ಇಂದು ಅವರು ಹೆಲಿಕ್ಯಾಪ್ಟರ್‌ನಲ್ಲಿ ತೆರಳುವ ನಿರ್ಗಮನದ ಫೋಟೊ ಹಾಕಿ ನೋಡಲು ಎಷ್ಟು ಚೆನ್ನಾಗಿದೆ ಎನ್ನುವ ಮೂಲಕ ಟೀಕಿಸಿದ್ದರು.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...