Homeಮುಖಪುಟಗಣರಾಜ್ಯೋತ್ಸವ ವಿಶೇಷ: ಸಂವಿಧಾನದ ಕಂಬಗಳು ಒಂದರ ಮೇಲೊಂದು ಎರಗದೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕು

ಗಣರಾಜ್ಯೋತ್ಸವ ವಿಶೇಷ: ಸಂವಿಧಾನದ ಕಂಬಗಳು ಒಂದರ ಮೇಲೊಂದು ಎರಗದೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕು

- Advertisement -
- Advertisement -

ಭಾರತ ದೇಶ 1947ರಲ್ಲಿ ಸ್ವಾತಂತ್ರ್ಯವಾಯಿತು. ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವನ್ನು ಒಪ್ಪಿ ಜಾರಿಗೊಳಿಸುವುದರ ಮುಖಾಂತರ 1950ರಲ್ಲಿ ಗಣರಾಜ್ಯವಾಯಿತು. ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸುವ ಕೆಲಸವನ್ನು ಶಾಸಕಾಂಗಕ್ಕೆ ಕಾನೂನುಗಳನ್ನು ಜಾರಿಗೊಳಿಸುವ ಕೆಲಸವನ್ನು ಕಾರ್ಯಾಂಗಕ್ಕೆ ಮತ್ತು ಕಾನೂನುಗಳ ವ್ಯಾಖ್ಯಾನ ಹಾಗೂ ಅವುಗಳ ಸಿಂಧುತ್ವ ಮತ್ತು ಕಾನೂನುಗಳನ್ನು ಉಲ್ಲಂಘಿಸಿದವರಿಗೆ ಶಿಕ್ಷೆಯನ್ನು ವಿಧಿಸುವ ಕೆಲಸವನ್ನು ನ್ಯಾಯಾಂಗಕ್ಕೆ ವಹಿಸಲಾಗಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಯೊಂದು ಅಂಗದ ಕೆಲಸ ಅವುಗಳ ಜವಾಬ್ದಾರಿ ಮತ್ತು ಕಾರ್ಯವ್ಯಾಪ್ತಿಯನ್ನು ತಿಳಿಯಪಡಿಸಲಾಗಿದೆ. ಈ ಅಂಗಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ವತಂತ್ರರು ಮತ್ತು ಸಮಾನರು.

ಆದರೆ ಕಳೆದ 72 ವರ್ಷಗಳಲ್ಲಿ ಘಟಿಸಿರುವ ಸತ್ಯವೆಂದರೆ ಒಂದು ಅಂಗ ಬೇರೆ ಅಂಗಗಳಿಗಿಂತ ಶ್ರೇಷ್ಠರೆಂದು ಪೈಪೋಟಿಗೆ ಬಿದ್ದಿರುವುದು. ಒಬ್ಬರು ಮತ್ತೊಬ್ಬರ ಮೇಲೆ ಹಿಡಿತವನ್ನು ಸಾಧಿಸಲು ಪ್ರಯತ್ನಿಸಿರುವುದು ಮತ್ತು ಒಬ್ಬರು ಇನ್ನೊಬ್ಬರ ಕಾರ್ಯ ಕ್ಷೇತ್ರದಲ್ಲಿ ಅತಿಕ್ರಮಣವನ್ನು ಮಾಡಿದ್ದು. ಈ ಕಸರತ್ತಿನಿಂದ ನಮ್ಮ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಿರುವುದೂ ಅಷ್ಟೇ ಸತ್ಯ.

1950ರಲ್ಲಿ ತಮಿಳುನಾಡು ಸರ್ಕಾರ ವೃತ್ತಿ ಶಿಕ್ಷಣದಲ್ಲಿ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಮತ್ತು ದಲಿತರಿಗೆ ನೀಡಿದ ಮೀಸಲಾತಿಯನ್ನು ಸರ್ವೋಚ್ಛ ನ್ಯಾಯಾಲಯವು ಚಂಪಕಂ ದೊರೈರಾಜ್ ಪ್ರಕರಣದಲ್ಲಿ ರದ್ದುಪಡಿಸಿತು. ಪಂಜಾಬ್ ಸರ್ಕಾರ ತಂದ ಭೂಮಿತಿ ಶಾಸನವನ್ನು ಗೋಲಕನಾಥ್ ಪ್ರಕರಣದಲ್ಲಿ ರದ್ದುಪಡಿಸಲಾಯಿತು. ಕೇರಳ ಸರ್ಕಾರ ತಂದ ಭೂಸುಧಾರಣೆ ಕಾಯ್ದೆಯನ್ನು ಕೇಶವಾನಂದ ಭಾರತಿ ಮಹಾಸ್ವಾಮಿಗಳ ಪ್ರಕರಣದಲ್ಲಿ ರದ್ದುಪಡಿಸಲಾಯಿತು. ಬ್ಯಾಂಕ್‌ಗಳ ರಾಷ್ಟ್ರೀಕರಣವನ್ನು ಕೂಪರ್ ಕೇಸ್‌ನಲ್ಲಿ ರದ್ದುಪಡಿಸಲಾಯಿತು. ಈ ರೀತಿ ಶಾಸಕಾಂಗ ತಂದ ಜನಪರ ಮತ್ತು ಪ್ರಗತಿಪರ ಕಾಯ್ದೆಗಳನ್ನು ರದ್ದುಪಡಿಸಲಾಯಿತು. ಆದರೆ ಶಾಸಕಾಂಗ ಸಂವಿಧಾನಕ್ಕೆ ತಿದ್ದುಪಡಿಗಳನ್ನು ತಂದು ಈ ತೀರ್ಪುಗಳನ್ನು ಶೂನ್ಯಗೈದು ತಾವು ಮಾಡಿದ ಕಾನೂನುಗಳನ್ನು ಅನುಷ್ಠಾನಗೊಳಿಸಿತು. ಅಂದು ಪ್ರಾರಂಭವಾದ ಶಾಸಕಾಂಗ ಮತ್ತು ನ್ಯಾಯಾಂಗದ ಘರ್ಷಣೆ ಇಂದಿಗೂ ಮುಂದುವರೆಯುತ್ತಿದೆ.

ನಂತರದ ದಿನಗಳಲ್ಲಿ ಶಾಸಕಾಂಗ ಸಂವಿಧಾನದ 24, 25 ಮತ್ತು 42ನೇ ತಿದ್ದುಪಡಿಗಳನ್ನು ತರುವುದರ ಮೂಲಕ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿತು. ನ್ಯಾಯಮೂರ್ತಿಗಳ ನೇಮಕಾತಿ, ವರ್ಗಾವಣೆ ಮತ್ತು ಬಡ್ತಿ ವಿಷಯಗಳಲ್ಲಿ ಕಾರ್ಯಾಂಗ ತನ್ನ ಮೇಲುಗೈಯನ್ನು ಸಾಧಿಸಿ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿತು. ರಾಜಕೀಯ ಕಾರಣಕ್ಕಾಗಿ ನ್ಯಾಯಾಧೀಶರ ನೇಮಕಾತಿ ಶೀಫಾರಸ್ಸುಗಳನ್ನು ತಿರಸ್ಕರಿಸುವುದು, ವಿಳಂಬ ಮಾಡುವುದು ಮತ್ತು ವಿನಾಕಾರಣ ನ್ಯಾಯಾಂಗಕ್ಕೆ ಹಿಂತಿರುಗಿಸುವುದು, ನ್ಯಾಯಾಧೀಶರ ನಿವೃತ್ತಿಯ ನಂತರ ಆಯ್ದ ಕೆಲವರನ್ನು ಕೆಲವು ಹುದ್ದೆಗಳಿಗೆ ನೇಮಿಸುವುದು, ಕೆಲವು ಶಿಫಾರಸ್ಸುಗಳನ್ನು ತಿರಸ್ಕರಿಸುವುದು ನ್ಯಾಯಾಂಗಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೇ ಇರುವುದು, ನ್ಯಾಯಾಧೀಶರ ಹುದ್ದೆಗಳನ್ನು ಹೆಚ್ಚಿಸದೇ ಇರುವುದು, ಅವಶ್ಯಕವಾಗಿ ಬೇಕಾದ ಆರ್ಥಿಕ ಸಂಪನ್ಮೂಲ ಒದಗಿಸದೇ ಇರುವುದು ಇತ್ಯಾದಿಯಾಗಿ ಇಂತಹ ಕೆಲಸಗಳು ಅವ್ಯಾಹತವಾಗಿ ನಡೆಯುತ್ತಾ ಹೋಯಿತು.

PC : Orissa POST

ಶಾಸಕಾಂಗ ಮತ್ತು ಕಾರ್ಯಾಂಗಗಳ ವೈಫಲ್ಯದಿಂದ ನ್ಯಾಯಾಂಗದ ಕ್ರಿಯಾಶೀಲತೆಗೆ ದಾರಿ ಮಾಡಿಕೊಟ್ಟಿತು. ಪ್ರಾರಂಭದಲ್ಲಿ ನ್ಯಾಯಾಂಗದ ಕ್ರಿಯಾಶೀಲತೆ ಒಳ್ಳೆಯ ಕೆಲಸ ಮಾಡಿತು ಮತ್ತು ದೇಶದ ಜನ ಅದನ್ನು ಸ್ವಾಗತಿಸಿದರು. ಪ್ರಮುಖವಾದ ಕೆಲವು ತೀರ್ಪುಗಳೆಂದರೆ: ಜೀವಿಸುವ ಹಕ್ಕು, ಮಾನವ ಘನತೆಯಿಂದ ಬದುಕುವ ಹಕ್ಕು, ಸಂಸ್ಕೃತಿ ಮತ್ತು ಪರಂಪರೆಯ ಹಕ್ಕು, ಮಹಿಳೆಯರನ್ನು ಸಭ್ಯತೆ ಮತ್ತು ಸೂಕ್ತ ಘನತೆಯಿಂದ ನಡೆಸಿಕೊಳ್ಳುವ ಹಕ್ಕು, ಮಾಹಿತಿ ಹಕ್ಕು, ಶವವನ್ನು ಗೌರವಪೂರಕವಾಗಿ ಸಂಸ್ಕಾರ ಮಾಡುವ ಹಕ್ಕು, ವಿದೇಶಿ ಪ್ರವಾಸದ ಹಕ್ಕು, ಒಬ್ಬನ ಕುಟುಂಬ ಮತ್ತು ಆತನ ಬಳಗದ ಜೊತೆ ಬೆರೆಯುವ ಹಕ್ಕು, ಏಕಾಂತ ಬಂಧನದ ವಿರುದ್ಧದ ಹಕ್ಕು, ವಿಚಾರಣೆ ಇಲ್ಲದೆ ಸೆರೆಮನೆಯಲ್ಲಿರುವುದರ ವಿರುದ್ಧದ ಹಕ್ಕು, ಬೇಡಿ ತೊಡಿಸುವುದರ ವಿರುದ್ದ ಹಕ್ಕು, ಅಭಿರಕ್ಷೆಯಲ್ಲಿರುವಾಗ ಹಿಂಸೆ ಮತ್ತು ಚಿತ್ರಹಿಂಸೆ ನೀಡುವುದರ ವಿರುದ್ಧದ ಹಕ್ಕು, ಜೀವಿಸುವ ಹಕ್ಕು, ಮೂಲಸೌಕರ್ಯಗಳ ಹಕ್ಕುಗಳನ್ನು ಅದು ಒಳಗೊಳ್ಳುತ್ತದೆ. ಆಹಾರ, ಬಟ್ಟೆ ಮತ್ತು ವಸತಿಯ ಹಕ್ಕನ್ನು ಹಾಗೂ ಜೀವಿಸುವ ಹಕ್ಕು ಒಳಗೊಂಡಿರುತ್ತದೆ. ಉಚಿತ ಕಾನೂನು ನೆರವು ಹಕ್ಕು, ಜೀತಗಾರಿಕೆಗೆ ಒಳಪಡದಿರುವ ಹಕ್ಕು, ವೈದ್ಯಕೀಯ ನೆರವು ಹಕ್ಕು, ಆರೋಗ್ಯಕರ ಪರಿಸರ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು ಇತ್ಯಾದಿಯಾಗಿ.

ಕ್ರಮೇಣ ಸಾರ್ವಜನಿಕ ಹಿತಾಸಕ್ತಿ ವ್ಯಾಜ್ಯಗಳನ್ನು ಸ್ವಂತ ಹಿತಾಸಕ್ತಿ ಸಾಧನೆಯಾಗಿ, ರಾಜಕೀಯ ಉದ್ದೇಶದ ಸಾಧನೆಯಾಗಿ ಪ್ರಚಾರ ಪಡೆಯಲೆಂದು ಮತ್ತು ಹಣಗಳಿಕೆಯ ದುರುಪಯೋಗಕ್ಕಾಗಿ ಉಪಯೋಗಿಸಿಕೊಳ್ಳಲಾಯಿತು. ಮತ್ತೊಂದು ಕಡೆ ಸಾರ್ವಜನಿಕ ಹಿತಾಸಕ್ತಿ ವ್ಯಾಜ್ಯಗಳ ಹೆಸರಿನಲ್ಲಿ ನ್ಯಾಯಾಲಯಗಳು, ಮಿತಿಮೀರಿದ ಕ್ರಿಯಾಶೀಲತೆಯಲ್ಲಿ ತೊಡಗಿದವು. ನ್ಯಾಯಾಲಯಗಳು ಕಾನೂನುಗಳನ್ನು ರಚಿಸುವ, ಕಾನೂನುಗಳಿಗೆ ತಿದ್ದುಪಡಿ ಮಾಡುವ ಮತ್ತು ಅವುಗಳನ್ನು ಅನುಷ್ಠಾನಗೊಳಿಸುವ ಶಾಸಕಾಂಗ ಮತ್ತು ಕಾರ್ಯಾಂಗಗಳ ಕೆಲಸದಲ್ಲಿ ಅತಿಕ್ರಮಣ ಮಾಡುವ ಕೆಲಸಕ್ಕೂ ಕೈಹಾಕಿದ್ದನ್ನು ಕಾಣಬಹುದು. ರಸ್ತೆಯನ್ನು ಮಾಡಿ, ಶಾಲೆಯನ್ನು ಕಟ್ಟಿ, ಆಸ್ಪತ್ರೆಯನ್ನು ಕಟ್ಟಿ, ಬಸ್ಸುಗಳನ್ನು ಓಡಿಸಿ, ಬಸ್‌ಗಳಿಗೆ ಹಸಿರು ಬಣ್ಣ ಹಚ್ಚಿ ಇತ್ಯಾದಿಯಾಗಿ ಆದೇಶಗಳನ್ನು ಹೊರಡಿಸಿದ್ದನ್ನು ಕಾಣಬಹುದು.

ಇಂತಹ ಪರಿಸ್ಥಿತಿಯಲ್ಲಿ ನಮ್ಮ ಮುಂದಿನ ದಾರಿ ಹೇಗಿರಬೇಕು ಎಂಬುದು ಮುಖ್ಯ.

1. ಶಾಸಕಾಂಗ ಮತ್ತು ಕಾರ್ಯಾಂಗಗಳನ್ನು ಬಲಹೀನಗೊಳಿಸಿ ನ್ಯಾಯಾಂಗವನ್ನು ಬಲಿಷ್ಠಗೊಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆರೋಗ್ಯಕರವಾದ ಬೆಳವಣಿಗೆಯಲ್ಲ.

2. ಶಾಸಕಾಂಗ ಮತ್ತು ಕಾರ್ಯಾಂಗಗಳು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಮತ್ತು ಸವಾಲುಗಳನ್ನು ಹಿಮ್ಮೆಟ್ಟಿಸಬೇಕು. ಸಂವಿಧಾನದಲ್ಲಿ ತಿಳಿಯಪಡಿಸಿರುವ ಕರ್ತವ್ಯವನ್ನು ನಿರ್ವಹಿಸಬೇಕು.

3. ಇಂದು ನ್ಯಾಯಾಂಗದ ಕ್ರಿಯಾಶೀಲತೆಯ ಅವಶ್ಯಕತೆ ಇದೆ ಮತ್ತು ಅದು ಮುಂದುವರಿಯಬೇಕು. ಆದರೆ ಮಿತಿಮೀರಿದ ಕ್ರಿಯಾಶೀಲತೆ ಮತ್ತು ಇತರ ಅಂಗಗಳ ಕೆಲಸದಲ್ಲಿ ಅತಿಕ್ರಮಣ ನಿಲ್ಲಬೇಕು. ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅದು ಹಾನಿಕಾರಕ.

4. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಒಂದಕ್ಕೆ ಪೂರಕವಾಗಿ ಮತ್ತೊಂದು ಕೆಲಸ ಮಾಡಿ ಸಂವಿಧಾನದ ಅಶಯಗಳನ್ನು ಅನುಷ್ಠಾನಗೊಳಿಸಬೇಕು.

ಹೆಚ್. ಎನ್. ನಾಗಮೋಹನ್ ದಾಸ್

ಜಸ್ಟೀಸ್ ಹೆಚ್. ಎನ್. ನಾಗಮೋಹನ್ ದಾಸ್
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕದಾದ್ಯಂತ ‘ಸಂವಿಧಾನ ಓದು’ ಕಾರ್ಯಕ್ರಮಗಳನ್ನು ಮುನ್ನಡೆಸಿದವರು


ಇದನ್ನೂ ಓದಿ: ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...