HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...