HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....