HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...