Homeಮುಖಪುಟಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

"ಹಿಂಸೆಗೆ ಪ್ರಚೋದನೆ ನೀಡುವ ಕಂಟೆಂಟ್‌ಗಳನ್ನು ತೆಗೆದುಹಾಕುವುದಕ್ಕೆ ನಮ್ಮಲ್ಲಿ ಬಲವಾದ ನಿಯಮಗಳಿವೆ" ಎಂದು ಟ್ವಿಟರ್ ಮತ್ತು ಫೇಸ್‌ಬುಕ್ ಎರಡೂ ಸ್ಪಷ್ಟಪಡಿಸಿವೆ.

- Advertisement -
- Advertisement -

2020 ರ ನವೆಂಬರ್ ತಿಂಗಳಿನಲ್ಲಿ ಗೃಹಮಂತ್ರಿ ಅಮಿತ್ ಶಾ ಅವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು. ಈ ಕುರಿತು ವಿಚಾರಣೆಗೆ ಹಾಜರಾದ ಫೇಸ್‌ಬುಕ್ ಮತ್ತು ಟ್ವಿಟರ್‌ನ ಕಾರ್ಯನಿರ್ವಾಹಕರನ್ನು ಸಂಸದೀಯ ಸಮಿತಿ ತರಾಟೆಗೆ ತೆಗೆದುಕೊಂಡಿದೆ.

ಸಂಸದೀಯ ಸಮಿತಿಯ ಕಾರ್ಯಸೂಚಿಯಂತೆ, ನಾಗರಿಕರ ಹಕ್ಕುಗಳನ್ನು ಕಾಪಾಡುವುದು, ಸಾಮಾಜಿಕ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಯುವುದು ಮತ್ತು ಡಿಜಿಟಲ್ ವೇದಿಕೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತ ವಿಷಯಗಳನ್ನು ಚರ್ಚಿಸಬೇಕಿತ್ತು. ಆದರೆ ಇಲ್ಲಿ, “ಅಮಿತ್ ಶಾ ಅವರ ಟ್ವಿಟರ್ ಖಾತೆಯನ್ನು ಏಕೆ ಬ್ಲಾಕ್ ಮಾಡಲಾಯಿತು? ಈ ಹಕ್ಕನ್ನು ನಿಮಗೆ ಯಾರು ನೀಡಿದರು? ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಅಮಿತ್ ಶಾ ಅವರ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದ ಚಿತ್ರಕ್ಕೆ ಸಂಬಂಧಿಸಿದಂತೆ ಕಾಪಿರೈಟ್ಸ್‌ ಸಮಸ್ಯೆ ಇದ್ದುದರಿಂದ ಅವರ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಬೇಕಾಯಿತು. ಇದು ಆಕಸ್ಮಿಕವಾಗಿ ಆದ ತೊಂದರೆ. ಬಳಿಕ ಅವರ ಖಾತೆಯನ್ನು ಮತ್ತೆ ಚಾಲ್ತಿಯಲ್ಲಿಡಲಾಯಿತು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

ಅಮೆರಿಕದಲ್ಲಿ ದ್ವೇಷ ಭಾಷಣ ಮತ್ತು ಹೇಳಿಕೆಗಳನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ವಿವಾದದ ಹಿನ್ನಲೆಯಲ್ಲಿ, “ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕಾನೂನು ಇಲ್ಲದಿರುವಾಗ ಟ್ವಿಟರ್ ಖಾತೆಯನ್ನು ಹೇಗೆ ಬ್ಲಾಕ್ ಮಾಡಬಹುದು” ಎಂದು ಸಮಿತಿಯಲ್ಲಿದ್ದ ಬಿಜೆಪಿ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

“ಹಿಂಸೆಗೆ ಪ್ರಚೋದನೆ ನೀಡುವ ಕಂಟೆಂಟ್‌ಗಳನ್ನು ತೆಗೆದುಹಾಕುವುದಕ್ಕೆ ನಮ್ಮಲ್ಲಿ ಬಲವಾದ ನಿಯಮಗಳಿವೆ” ಎಂದು ಟ್ವಿಟರ್ ಮತ್ತು ಫೇಸ್‌ಬುಕ್ ಎರಡೂ ಸ್ಪಷ್ಟಪಡಿಸಿವೆ.

ವಾಷಿಂಗ್ಟನ್ ಕ್ಯಾಪಿಟಲ್‌ ಮೇಲೆ ನಡೆದ ಹಿಂಸಾಚಾರದ ನಂತರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನು ಟ್ವಿಟರ್ ನಿರ್ಬಂಧಿಸಿತ್ತು. ಇದು ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

2020 ರ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.

ಈ ಕಾರಣಕ್ಕೆ ಫೇಸ್‌ಬುಕ್ ಮತ್ತು ಟ್ವಿಟರ್ ಭಾರತದ ಆಡಳಿತಾರೂಢ ಬಿಜೆಪಿಯ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂಜರಿಯುತ್ತಿದೆ ಎಂದು ಈ ಹಿಂದೆ ಹಲವರು ಆರೋಪಿಸಿದ್ದರು.


ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...