Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...