Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...