Homeಮುಖಪುಟಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡವರು ಮತ್ತು ಅಲ್ಲಿನ ಮೂಲ ಬಿಜೆಪಿಗರ ನಡುವೆ ಕಿತ್ತಾಟ ನಡೆಯುತ್ತಿದ್ದು, ಸದ್ಯ ಎರಡು ಬಿಜೆಪಿ ಕಚೇರಿಗಳಲ್ಲಿ ಇದು ತಾರಕಕ್ಕೆ ಮುಟ್ಟಿದ ಘಟನೆ ಗುರುವಾರ ನಡೆದಿದೆ.

- Advertisement -
- Advertisement -

ಪಶ್ಚಿಮ ಬಂಗಾಳದ ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಾಗಿಲು ಮುಚ್ಚಿ ನಡೆಸಿದ ವಿಶೇಷ ಸಭೆಯಲ್ಲಿ ಟಿಎಂಸಿಯಿಂದ ಬಂದವರು ಮತ್ತು ಮೂಲ ಬಿಜೆಪಿಗರ ನಡುವೆ ಹೊಡೆದಾಟ ಸಂಭವಿಸಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಮೆನನ್ ಸಮ್ಮುಖದಲ್ಲೇ ಈ ಬಡಿದಾಟ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುರ್ದ್ವಾನ್ ಪಟ್ಟಣದಲ್ಲಿ ಬಿಜೆಪಿ ಕಚೇರಿ ಹೊರಗೆ ಬೀದಿಯಲ್ಲಿಯೇ ಕಾರ್ಯಕರ್ತರ ನಡುವೆ ಬಡಿದಾಟ ನಡೆದಿದ್ದು, ಪಾರ್ಟಿ ಕಚೇರಿಯ ಮೇಲೆ ಕಲ್ಲು ತೂರಲಾಗಿದೆ ಮತ್ತು ಕಚೇರಿ ಹೊರಗೆ ನಿಲ್ಲಿಸಿದ್ದ ಬೈಕ್ ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರವೇಶಿಸಿದ ಪೊಲೀಸರ ಜೊತೆಯೂ ಘರ್ಷಣೆ ನಡೆದಿದೆ.

ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಇರುವ ಕಾರಣ, ಆಂತರಿಕ ದ್ವೇಷವು ಪಕ್ಷದ ಉನ್ನತ ನಾಯಕರಿಗೆ ಕಳವಳ ಮೂಡಿಸಿದೆ. ಇದು ಪಕ್ಷದ ಶಿಸ್ತನ್ನು ಹಾಳು ಮಾಡುವುದಷ್ಟೇ ಅಲ್ಲ, “ಬಿಜೆಪಿಯ ಟಿಎಂಸಿಕರಣ”ದ ಪ್ರಕ್ರಿಯೆಯಿಂದ ನಷ್ಟವೂ ಸಂಭವಿಸಬಹುದು ಎಂದು ಬಿಜೆಪಿ ನಾಯಕರು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

“ಬಿಜೆಪಿ ಟಿಎಂಸಿ ಜನರಿಂದ ತುಂಬಿ ಹೋದರೆ, ನಮ್ಮ ಬಿಜೆಪಿ ಟಿಎಂಸಿ ‘ಟೀಮ್ ಬಿ’ಯಂತೆ ಕಾಣಲು ಪ್ರಾರಂಭಿಸಿದರೆ, ಟಿಎಂಸಿಯನ್ನು ತಿರಸ್ಕರಿಸಲು ಮತ್ತು ಬಿಜೆಪಿಗೆ ಮತ ಚಲಾಯಿಸಲು ಬಯಸುವ ಮತದಾರರು ಎರಡು ಬಾರಿ ಯೋಚಿಸಬಹುದು” ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮುಂಬರುವ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 200 ಸ್ಥಾನಗಳ ಗುರಿಯನ್ನು ರಾಜ್ಯ ಬಿಜೆಪಿಗೆ ನಿಗದಿಪಡಿಸಿದ್ದನ್ನು ಇಲ್ಲಿ ಗಮನಿಸಬೇಕು.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ, ಬಿಜೆಪಿಗೆ ಯಾರು ಸೇರಬಹುದು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಗುರುವಾರ ಪೂರ್ವ ಬುರ್ದ್ವಾನ್‌ನ ಕಾಂಕ್ಸಾ, ಆಸ್ಗ್ರಾಮ್, ಮಂಗಲ್‌ಕೋಟ್, ಕಟ್ವಾ ಮತ್ತು ಇತರ ಸ್ಥಳಗಳಿಂದ ಹಲವಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಬುರ್ದ್ವಾನ್ ಪಟ್ಟಣ ಕಚೇರಿಯ ಮುಂದೆ ಜಮಾಯಿಸಿ ಜಿಲ್ಲಾ ಮುಖ್ಯಸ್ಥ ಸಂದೀಪ್ ನಂದಿ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಸಂದೀಪ್ ನಂದಿಯವರನ್ನು ತಕ್ಷಣ ತೆಗೆದುಹಾಕುವಂತೆ ಒತ್ತಾಯಿಸಿದರು. ಆಗ ಬುರ್ದ್ವಾನ್‌ನಲ್ಲಿ ಗೊಂದಲ ಉಂಟಾಯಿತು.

ಮೂಲಗಳ ಪ್ರಕಾರ, ಕಚೇರಿಯೊಳಗಿದ್ದ ನಂದಿಗೆ ನಿಷ್ಠರಾಗಿರುವ ಬಣವು ಕಚೇರಿಯ ಮಾಳಿಗೆ ಹತ್ತಿ ಪ್ರತಿಭಟಿಸುತ್ತಿದ್ದ ಭಿನ್ನಮತೀಯರ ಮೇಲೆ ಕಲ್ಲುಗಳನ್ನು ಎಸೆದರು. ಭಿನ್ನಮತೀಯ ಗುಂಪು ಕೂಡ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿ, ಕಚೇರಿಯ ಕಿಟಕಿಗಳನ್ನು ಒಡೆದಿದೆ. ಕೆಲವು ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ಬೆಂಕಿ ಹಚ್ಚಿದರು.

ಪಕ್ಷವನ್ನು ಕಟ್ಟಲು ತಾವು ರಕ್ತ ಮತ್ತು ಬೆವರು ನೀಡಿದ್ದೇವೆ ಎಂದು ಭಿನ್ನಮತೀಯರ ಗುಂಪು ಹೇಳಿಕೊಂಡಿದೆ. ಆದರೆ ತೃಣಮೂಲದಿಂದ ಬಂದ ಪಕ್ಷಾಂತರಿಗಳನ್ನು ಪ್ರೋತ್ಸಾಹಿಸುತ್ತಿರುವ ಜಿಲ್ಲಾಧ್ಯಕ್ಷ ನಂದಿ ತಮ್ಮನ್ನು ಬದಿಗೊತ್ತಿದ್ದಾರೆ ಎಂದು ಭಿನ್ನಮತೀಯರ ಗುಂಪು (ಮೂಲ ಬಿಜೆಪಿಗರ ಗುಂಪು) ಆರೋಪಿಸಿದೆ.

ಎರಡು ವಾರಗಳ ಹಿಂದೆ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಬುರ್ದ್ವಾನ್‌ಗೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಿದ್ದರು. ಅವರು ಕಳೆದ ತಿಂಗಳು ಬುರ್ದ್ವಾನ್ ಕಚೇರಿಯನ್ನು ಉದ್ಘಾಟಿಸಿದ್ದರು. ಇದು ಬಣಗಳ ಘರ್ಷಣೆ ಎಂಬುದನ್ನು ಬಿಜೆಪಿ ನಿರಾಕರಿಸಿದೆ.

“ಜೆ.ಪಿ.ನಡ್ಡಾ ಅವರ ಬೃಹತ್ ರ‍್ಯಾಲಿಯನ್ನು ನೀವು ನೋಡಿದ್ದೀರಿ. ತೃಣಮೂಲವು ಈಗ ಭಯಭೀತವಾಗಿದೆ, ಆದ್ದರಿಂದ ಅವರು ಈ ತೊಂದರೆಯನ್ನು ಸೃಷ್ಟಿಸಲು ಸಂಚು ಮಾಡಿದ್ದಾರೆ. ಸ್ಥಳೀಯ ಮುಖಂಡರು ಇದನ್ನು ಯೋಜಿಸಿದ್ದಾರೆ, ಈ ಕಾರ್ಯಾಚರಣೆಯನ್ನು ನಡೆಸಲು ಜನರನ್ನು ನೇಮಿಸಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಮತ್ತು ‘ಪಿಕೆ’ ತಂಡ ಇದನ್ನು ಮಾಡಿದ್ದಾರೆ. ಆಡಳಿತವು ತನಿಖೆ ನಡೆಸಿ ತಪ್ಪಿಸ್ಥರನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ”ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ಹೇಳಿದ್ದಾರೆ. ತೃಣಮೂಲ ಸಚಿವ ಮತ್ತು ಬುರ್ದ್ವಾನ್ ಜಿಲ್ಲಾ ನಾಯಕ ಸ್ವಪನ್ ದೇಬ್ನಾಥ್ ಇದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ: ಒಬ್ಬ ಕಾರ್ಯಕರ್ತನ ಸಾವು – ಬಿಜೆಪಿ ಆರೋಪ

ಅಸಾನ್‌ಸೋಲ್‌ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು ಎಂದು ಬಾಬುಲ್ ಸುಪ್ರಿಯೋ ಒಪ್ಪಿಕೊಂಡಿದ್ದಾರೆ. “ಯಾವುದೇ ಕುಟುಂಬದಲ್ಲಿ, ಸಮಸ್ಯೆಗಳಿರುತ್ತವೆ, ಕೋಪವಿರುತ್ತದೆ, ಭಿನ್ನಾಭಿಪ್ರಾವಿದ್ದೇ ಇರುತ್ತದೆ. ನಮ್ಮ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ನನ್ನನ್ನು ಒಟ್ಟಿಗೆ ಭೇಟಿಯಾದರು. ಇಂತಹ ಸಭೆ ಆಗಾಗ್ಗೆ ಆಗುವುದಿಲ್ಲ. ಆದ್ದರಿಂದ 10 ರಿಂದ 30 ಜನರು ಒಂದೇ ಸಮಯದಲ್ಲಿ ಮಾತನಾಡಲು ಪ್ರಾರಂಭಿಸಿದಾಗ, ಸ್ವಾಭಾವಿಕವಾಗಿ ಗೊಂದಲ ಏರ್ಪಡುತ್ತದೆ’ ಎಂದ ಕೇಂದ್ರ ಸಚಿವ ಬಾಬುಲ್ ಹೇಳಿದ್ದಾರೆ.

ಆದರೆ ಮೂಲಗಳು ಹೇಳುವಂತೆ, ಇಲ್ಲಿಯೂ ತೃಣಮೂಲದಿಂದ ಬಂದವರೊಂದಿಗೆ ಸಂಘರ್ಷದಲ್ಲಿದ್ದ ಹಳೆಯ ಬಿಜೆಪಿ ಕಾರ್ಯಕರ್ತರು ಮತದಾನ ತಂತ್ರ ಮಾತುಕತೆಗಾಗಿ ಕಚೇರಿಗೆ ಬಂದಿದ್ದರು. ಆದರೆ ಹೊಸದಾಗಿ ನೇಮಕಗೊಂಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರಿಜಿತ್ ರಾಯ್ ಅವರ ಬಗ್ಗೆ ವಿವಾದ ಭುಗಿಲೆದ್ದಿತು. ಅವರು ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಸಮಿತಿಯಿಂದ ಹಳೆಯ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಿದ್ದರು ಎಂದು ಆರೋಪಿಸಲಾಗಿದೆ.

ಬಿಜೆಪಿಯಲ್ಲಿ ಬಣಗಳ ಕಾದಾಟದ ಮೊದಲ ಘಟನೆಗಳೇನೂ ಇವಲ್ಲ. ಜನವರಿ 8 ರಂದು ನಂದಿಗ್ರಾಮದಲ್ಲಿ ಕೂಡ ಇಂಥದ್ದು ನಡೆದಿತ್ತು. ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ಸುವೆಂಡು ಅಧಿಕಾರಿ ಮತ್ತು ಬಿಜೆಪಿ ಉನ್ನತ ನಾಯಕರಾದ ದಿಲೀಪ್ ಘೋಷ್, ಕೈಲಾಶ್ ವಿಜಯವರ್ಗಿಯಾ ಅವರು ಭಾಗವಹಿಸಿದ ರ‍್ಯಾಲಿಯಲ್ಲಿ, ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ಭಾಗವು ಕಲ್ಲು ತೂರಾಟ ನಡೆಸಿತ್ತು. ಅಲ್ಲಿ ತೃಣಮೂಲ ಕಾರ್ಯಕರ್ತರು ವಿದ್ಯುಕ್ತವಾಗಿ ಬಿಜೆಪಿಗೆ ಸೇರಲು ಕಾಯುತ್ತಿದ್ದರು. “ನಮ್ಮನ್ನು (ಬಿಜೆಪಿ ಕಾರ್ಯಕರ್ತರನ್ನು) ಹಿಂಸಿಸಿದ ತೃಣಮೂಲದ ಜನರು ಈಗ ನಮ್ಮ ಪಕ್ಷಕ್ಕೆ ಸೇರಲು ಹೊರಟಿದ್ದಾರೆ. ಅದನ್ನು ಸಹಿಸಲು ನಾವು ಸಿದ್ಧರಿಲ್ಲ” ಎಂದು ಹಳೆಯ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದರು.


ಇದನ್ನೂ ಓದಿ: ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನಪ.ಬಂಗಾಳ: 'ಗೋಲಿ ಮಾರೋ ಸಾ***ಕೋ' ಘೋಷಣೆ ಕೂಗಿದ 3 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...