Homeಕರ್ನಾಟಕಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ- ಬಿ ಎಂ ಹನೀಫ್

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸಿದರು ಎನ್ನುವ ಕಾರಣಕ್ಕೆ 85 ವರ್ಷದ ಹಿರಿಯ ಸಾಹಿತಿ, ನಾಡೋಜ ಹಂ.ಪ.ನಾಗರಾಜಯ್ಯ (ಹಂಪನಾ) ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಆತಂಕಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ.

“ಜನವರಿ 17 ರಂದು ಮಂಡ್ಯದಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ಹಂಪನಾ, ಕೃಷಿ ಕಾನೂನುಗಳ ಬಗ್ಗೆ ಭಾಷಣ ಮಾಡುತ್ತಾ ಮೋದಿ ಸರ್ಕಾರವನ್ನು ಟೀಕಿಸಿದ್ದರು. ಕಳೆದ ಹಲವು ದಿನಗಳಿಂದ ರೈತರು ಚಳಿ-ಮಳೆಯನ್ನು ಲೆಕ್ಕಿಸದೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸೌಜನ್ಯಕ್ಕಾದರೂ ಪ್ರಧಾನಿಯವರು ರೈತರನ್ನು ಭೇಟಿ ಮಾಡಿ ಮಾತನಾಡಬಾರದೇ? ಸರ್ಕಾರ ದುರ್ಯೋಧನನಂತೆ ವರ್ತಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದರು. ಅದೇ ಕಾರಣಕ್ಕೆ ಅವರನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ ಎಂದು ಹಂಪನಾ ಅವರ ಮಗಳು ಆರತಿ ಹಂಪನಾ ನಾನುಗೌರಿ.ಕಾಂಗೆ ತಿಳಿಸಿದರು.

“ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರಿಬ್ಬರು ಮಂಡ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಂತೆ. ಈ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿಯನ್ನು ಬೆಂಗಳೂರಿನಿಂದ ಮಂಡ್ಯದವರೆಗೆ ಕರೆಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕನಿಷ್ಟ ಎಫ್‌ಐಆರ್ ಕೂಡ ದಾಖಲಾಗಿಲ್ಲದಿರುವಾಗ, ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಿ ಹಂಪನಾ ಅವರನ್ನು ಠಾಣೆಯವರೆಗೆ ಕರೆಸಿಕೊಳ್ಳುವ ಅಗತ್ಯ ಏನಿತ್ತು? ಇದು ನಿಜಕ್ಕೂ ಪೊಲೀಸ್ ರಾಜ್ಯದ ದಬ್ಬಾಳಿಕೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ ಪ್ರಕರಣ: ಗುತ್ತಿಗೆದಾರ ಸೇರಿದಂತೆ ಮೂವರ ಬಂಧನ

ಮಂಡ್ಯ ಪೊಲೀಸರ ಈ ಕ್ರಮದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂತಹ ಸಂವೇದನಾರಹಿತ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಾಡಿನ ಹತ್ತಾರು ಸಾಹಿತಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಸಾಹಿತಿಗಳಾದ ಅಬ್ಬೂರು ರಾಜಶೇಖರ್, “ಹೃದಯ, ಮಿದುಳು ಇಲ್ಲದ ಸರ್ಕಾರ ನಾಡಿನ ವಿದ್ವಾಂಸರನ್ನೂ ಪೊಲೀಸ್ ಠಾಣೆಗೆ ಕರೆಸುವ ಹೀನಕೃತ್ಯಕ್ಕೆ ಇಳಿದಿದೆ. ಹಂಪನಾ ಅವರು ರೈತ ವಿರೋಧಿ ನಿಲುವನ್ನು ಟೀಕಿಸಿದ್ದು ಘೋರ ಅಪರಾಧ! ಇಂತಹ ಸರ್ವಾಧಿಕಾರಿ ಸರ್ಕಾರದ ನೀತಿಗೆ ಧಿಕ್ಕಾರ. ಅತ್ಯಂತ ಖಂಡನಾರ್ಹ ಘಟನೆ” ಎಂದು ಕಿಡಿಕಾರಿದ್ದಾರೆ.

ಮತ್ತೊಬ್ಬ ಸಾಹಿತಿಗಳಾದ ಲಕ್ಷ್ಮಣ ಕೊಡಸೆ, “ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ಹಂಪನಾ ಅವರನ್ನು ಯಾರೋ ದೂರು ನೀಡಿದರೆಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲು ಮಾಡಿಕೊಂಡಿದ್ದು ಆಡಳಿತ ವ್ಯವಸ್ಥೆಯ ಕ್ರೌರ್ಯ. ನಾಚಿಕೆಗೇಡಿನ ಈ ದುರ್ವರ್ತನೆಗೆ ಹಂಪನಾ ಅವರಿಂದ ಪಾಠ ಹೇಳಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ವಿದ್ವಾಂಸರ ಬಗ್ಗೆ ಗೌರವ ಇದ್ದರೆ ಇಬ್ಬರೂ ಹಂಪನಾ ಅವರ ಬಳಿ ಕ್ಷಮೆ ಕೋರಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ ಎಂ ಹನೀಫ್, “ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ. ಹಂಪನಾ ಅವರಿಗೆ ಆಗಿರುವ ಅವಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಮತ್ತು ಕನ್ನಡದ ಎಲ್ಲ ಸಾಹಿತಿಗಳಿಗೆ ಅವಮಾನ” ಎಂದು ಖಂಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಪೊಲೀಸರ ಈ ನಡೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!


ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಂಪನಾರನ್ನು ವಿಚಾರಣೆಗೆ ಒಳಪಡಿಸಿದ್ದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದು ಕಂಡನಾರ್ಹ.

  2. ದೇಶಭಕ್ತರ‌ ಕಣ್ಣಿಗೆ ‘ಕಂಡೋರೆಲ್ಲಾ’ ದೇಶದ್ರೋಹಿಗಳಂತೆ ಕಾಣುವಂತಾಗಿದ್ದು ವಿಶ್ವಗುರು ನಾಡಿನ ಹಿರಿಮೆ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...