Homeಕರ್ನಾಟಕಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ- ಬಿ ಎಂ ಹನೀಫ್

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸಿದರು ಎನ್ನುವ ಕಾರಣಕ್ಕೆ 85 ವರ್ಷದ ಹಿರಿಯ ಸಾಹಿತಿ, ನಾಡೋಜ ಹಂ.ಪ.ನಾಗರಾಜಯ್ಯ (ಹಂಪನಾ) ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಆತಂಕಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ.

“ಜನವರಿ 17 ರಂದು ಮಂಡ್ಯದಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ಹಂಪನಾ, ಕೃಷಿ ಕಾನೂನುಗಳ ಬಗ್ಗೆ ಭಾಷಣ ಮಾಡುತ್ತಾ ಮೋದಿ ಸರ್ಕಾರವನ್ನು ಟೀಕಿಸಿದ್ದರು. ಕಳೆದ ಹಲವು ದಿನಗಳಿಂದ ರೈತರು ಚಳಿ-ಮಳೆಯನ್ನು ಲೆಕ್ಕಿಸದೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸೌಜನ್ಯಕ್ಕಾದರೂ ಪ್ರಧಾನಿಯವರು ರೈತರನ್ನು ಭೇಟಿ ಮಾಡಿ ಮಾತನಾಡಬಾರದೇ? ಸರ್ಕಾರ ದುರ್ಯೋಧನನಂತೆ ವರ್ತಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದರು. ಅದೇ ಕಾರಣಕ್ಕೆ ಅವರನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ ಎಂದು ಹಂಪನಾ ಅವರ ಮಗಳು ಆರತಿ ಹಂಪನಾ ನಾನುಗೌರಿ.ಕಾಂಗೆ ತಿಳಿಸಿದರು.

“ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರಿಬ್ಬರು ಮಂಡ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಂತೆ. ಈ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿಯನ್ನು ಬೆಂಗಳೂರಿನಿಂದ ಮಂಡ್ಯದವರೆಗೆ ಕರೆಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕನಿಷ್ಟ ಎಫ್‌ಐಆರ್ ಕೂಡ ದಾಖಲಾಗಿಲ್ಲದಿರುವಾಗ, ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಿ ಹಂಪನಾ ಅವರನ್ನು ಠಾಣೆಯವರೆಗೆ ಕರೆಸಿಕೊಳ್ಳುವ ಅಗತ್ಯ ಏನಿತ್ತು? ಇದು ನಿಜಕ್ಕೂ ಪೊಲೀಸ್ ರಾಜ್ಯದ ದಬ್ಬಾಳಿಕೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ ಪ್ರಕರಣ: ಗುತ್ತಿಗೆದಾರ ಸೇರಿದಂತೆ ಮೂವರ ಬಂಧನ

ಮಂಡ್ಯ ಪೊಲೀಸರ ಈ ಕ್ರಮದ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂತಹ ಸಂವೇದನಾರಹಿತ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಾಡಿನ ಹತ್ತಾರು ಸಾಹಿತಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಸಾಹಿತಿಗಳಾದ ಅಬ್ಬೂರು ರಾಜಶೇಖರ್, “ಹೃದಯ, ಮಿದುಳು ಇಲ್ಲದ ಸರ್ಕಾರ ನಾಡಿನ ವಿದ್ವಾಂಸರನ್ನೂ ಪೊಲೀಸ್ ಠಾಣೆಗೆ ಕರೆಸುವ ಹೀನಕೃತ್ಯಕ್ಕೆ ಇಳಿದಿದೆ. ಹಂಪನಾ ಅವರು ರೈತ ವಿರೋಧಿ ನಿಲುವನ್ನು ಟೀಕಿಸಿದ್ದು ಘೋರ ಅಪರಾಧ! ಇಂತಹ ಸರ್ವಾಧಿಕಾರಿ ಸರ್ಕಾರದ ನೀತಿಗೆ ಧಿಕ್ಕಾರ. ಅತ್ಯಂತ ಖಂಡನಾರ್ಹ ಘಟನೆ” ಎಂದು ಕಿಡಿಕಾರಿದ್ದಾರೆ.

ಮತ್ತೊಬ್ಬ ಸಾಹಿತಿಗಳಾದ ಲಕ್ಷ್ಮಣ ಕೊಡಸೆ, “ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ಹಂಪನಾ ಅವರನ್ನು ಯಾರೋ ದೂರು ನೀಡಿದರೆಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲು ಮಾಡಿಕೊಂಡಿದ್ದು ಆಡಳಿತ ವ್ಯವಸ್ಥೆಯ ಕ್ರೌರ್ಯ. ನಾಚಿಕೆಗೇಡಿನ ಈ ದುರ್ವರ್ತನೆಗೆ ಹಂಪನಾ ಅವರಿಂದ ಪಾಠ ಹೇಳಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ವಿದ್ವಾಂಸರ ಬಗ್ಗೆ ಗೌರವ ಇದ್ದರೆ ಇಬ್ಬರೂ ಹಂಪನಾ ಅವರ ಬಳಿ ಕ್ಷಮೆ ಕೋರಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ ಎಂ ಹನೀಫ್, “ದುರ್ಯೋಧನ ಎನ್ನುವುದು ಬೈಗುಳವೇ? CRPC ಅಥವಾ IPC ಯ ಯಾವ ಸೆಕ್ಷನ್ ಪ್ರಕಾರ ಇದು ಬೈಗುಳ? ಸರಕಾರ ದುರ್ಯೋಧನನಂತೆ ವರ್ತಿಸುತ್ತಿದೆ ಎನ್ನುವುದು ಒಬ್ಬ ಘನತೆವೆತ್ತ ಸಾಹಿತಿ ಬಳಸಬಹುದಾದ ಅತ್ಯಂತ ಸಭ್ಯ ಕನ್ನಡ. ಹಂಪನಾ ಅವರಿಗೆ ಆಗಿರುವ ಅವಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಮತ್ತು ಕನ್ನಡದ ಎಲ್ಲ ಸಾಹಿತಿಗಳಿಗೆ ಅವಮಾನ” ಎಂದು ಖಂಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಪೊಲೀಸರ ಈ ನಡೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!


ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಂಪನಾರನ್ನು ವಿಚಾರಣೆಗೆ ಒಳಪಡಿಸಿದ್ದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದು ಕಂಡನಾರ್ಹ.

  2. ದೇಶಭಕ್ತರ‌ ಕಣ್ಣಿಗೆ ‘ಕಂಡೋರೆಲ್ಲಾ’ ದೇಶದ್ರೋಹಿಗಳಂತೆ ಕಾಣುವಂತಾಗಿದ್ದು ವಿಶ್ವಗುರು ನಾಡಿನ ಹಿರಿಮೆ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...