Homeಮುಖಪುಟದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ರಾಜಧಾನಿಯ ಹೊರಭಾಗಕ್ಕೆ ಮಾತ್ರ ರ‍್ಯಾಲಿ ಸಿಮೀತವಾಗಿರಲಿ ಎಂದು ದೆಹಲಿ ಪೊಲೀಸರು ಬಯಸುತ್ತಿದ್ದಾರೆ. ಆದರೆ ಇದಕ್ಕೆ ರೈತರು ಒಪ್ಪಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾನಿರತ ರೈತರು ನಡೆಸಲು ಉದ್ದೇಶಿಸಿರುವ ಟ್ಯ್ರಾಕ್ಟರ್ ರ‍್ಯಾಲಿಯನ್ನು ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ಬದಲು ಹೊರವಲಯದಲ್ಲೇ ನಡೆಸಲು ದೆಹಲಿ ಪೊಲೀಸ್ ಉನ್ನತಾಧಿಕಾರಿಗಳು ರೈತರನ್ನು ಮನವೊಲಿಸಲು ಗುರುವಾರವೂ ಯತ್ನಿಸಿದರು. ಆದರೆ ಇದಕ್ಕೆ ರೈತರು ಒಪ್ಪದೆ ದೆಹಲಿ ಒಳಗೆ ಶಾಂತಿಯುತವಾಗಿ ಟ್ಯ್ರಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಂಘು ಗಡಿ ಬಳಿಯ ರೆಸಾರ್ಟ್ ಒಂದರಲ್ಲಿ ನಿನ್ನೆ ದೆಹಲಿ ಉತ್ತರ ಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಮತ್ತು ಪಶ್ಚಿಮ ವಲಯದ ವಿಶೇಷ ಪೊಲೀಸ್ ಆಯುಕ್ತ (ಶಾಂತಿ ಮತ್ತು ಸುವ್ಯವಸ್ಥೆ) ಸಂಜಯ್ ಸಿಂಗ್, ಗುಪ್ತಚಾರ ವಿಭಾಗದ ದೀಪೇಂದ್ರ ಪಟ್ನಾಯಕ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತ ಸಂಘಟನೆಗಳ ನಾಯಕರ ಮನವೊಲಿಕೆಗೆ ಯತ್ನಿಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯೋಗೇಂದ್ರ ಯಾದವ್, ಪೊಲೀಸರ ಸಲಹೆ ಒಪ್ಪದ ರೈತರು ದೆಹಲಿಯ ಭಾಗವಾಗಿರುವ ರಿಂಗ್ ರೋಡಿನಲ್ಲೇ ಶಾಂತಿಯುತ ರ‍್ಯಾಲಿ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರದಿಂದಲೂ ರೈತ ಸಂಘಟನೆಗಳ ಮನವೊಲಿಕೆಗೆ ಯತ್ನಿಸುತ್ತಲೇ ಬಂದಿದ್ದಾರೆ. ರ‍್ಯಾಲಿ ರದ್ದಿಗೆ ಆಗ್ರಹಿಸಿದ ಪೊಲೀಸರ ಅರ್ಜಿಗೆ ಮಾನ್ಯತೆ ನೀಡದ ಸುಪ್ರೀಂಕೋರ್ಟ್, ಅದನ್ನು ನೀವೇ ನಿರ್ಧರಿಸಿ ಎಂದು ಬುಧವಾರ ಪೊಲೀಸರಿಗೆ ತಿಳಿಸಿತ್ತು. ಈ ಕಾರಣಕ್ಕೆ ಇಂದು ಗುರುವಾರ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ರ‍್ಯಾಲಿ ರೂಟ್ ಬದಲಿಸುವಮತೆ ರೈತ ನಾಯಕರ ಮನವೊಲಿಕೆಗೆ ಯತ್ನಿಸಿದರು.

ಜ. 26 ಕ್ಕೆ ಟ್ರ್ಯಾಕ್ಟರ್ ರ್ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರಿಂಗ್ ರೋಡ್‌ನಲ್ಲಿ ರ‍್ಯಾಲಿ ಬೇಡ ಮತ್ತು ಕಿಸಾನ್ ಘಾಟ್‌ನತ್ತ ರ‍್ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ. ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ‍್ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್‌ ವೇನಲ್ಲಿ ರ‍್ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ‍್ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

‘ಸಂಪೂರ್ಣ ಹೊರವಲಯಕ್ಕೆ ರ‍್ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ (ಇದು ದೆಹಲಿಯ ಭಾಗವೇ ಆಗಿದ್ದು, ಸಂಚಾರ ದಟ್ಟಣೆಯ ರಸ್ತೆಯಾಗಿದೆ) ರ‍್ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ‍್ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

‘ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ಈ ಮೊದಲೇ ತಿಳಿಸಿದ್ದವು.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...