Homeಅಂಕಣಗಳುಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

- Advertisement -
- Advertisement -

ಪ್ರವಾಸ ಬಹುತೇಕ ಎಲ್ಲರಿಗೂ ಇಷ್ಟ. ಪ್ರತಿ ಪ್ರವಾಸತಾಣಕ್ಕೂ ತನ್ನದೇ ಆದ ವಿಭಿನ್ನತೆ ಮತ್ತು ವಿಶಿಷ್ಟತೆ ಇರುತ್ತದೆ. ಕೆಲವರಿಗೆ ಸಮುದ್ರ ತೀರ ಇಷ್ಟವಾದರೆ ಇನ್ನು ಕೆಲವರಿಗೆ ದೇವಸ್ಥಾನಗಳ ಬಗ್ಗೆ ಒಲವು. ನದಿಗಳು, ಅಣೆಕಟ್ಟೆಗಳು, ಮ್ಯೂಸಿಯಂಗಳು, ಮಂಜು ಬೀಳುವ ಪ್ರದೇಶ, ಬೆಟ್ಟಗುಡ್ಡಗಳು, ಹಿಮಗುಡ್ಡೆ ಹೀಗೆ ಒಬ್ಬೊಬ್ಬರಿಗೂ ತಮ್ಮದೇ ಆಯ್ಕೆಯ ನೆಚ್ಚಿನ ತಾಣಗಳು ಇರುತ್ತವೆ. ಚಾರಣ (ಟ್ರೆಕ್ಕಿಂಗ್) ಕೆಲವರಿಗೆ ಪ್ರೀತಿಪಾತ್ರವಾದರೆ ಮತ್ತೆ ಕೆಲವರಿಗೆ ಬಲು ಕಷ್ಟದ್ದು. ಸಾಹಸಿ ಚಾರಣಿಗರಿಗೆ ಹೇಳಿಮಾಡಿಸಿದ ಜಾಗ ಸಾವನದುರ್ಗ ಬೆಟ್ಟ. ಸಾಹಸಿಗಳು ಮಾತ್ರವಲ್ಲ, ನೀವೆಲ್ಲರೂ ಕೂಡ ನಿಮ್ಮ ಶಕ್ತ್ಯಾನುಸಾರ ಈ ಬೆಟ್ಟ ಹತ್ತಿ ಸಂಭ್ರಮಿಸಬಹುದು. ಆರೋಗ್ಯಕ್ಕೂ ಇದು ಒಳ್ಳೆಯದು. ನಿಮಗೆ ಬೆಟ್ಟ ಹತ್ತುವುದು ಕಷ್ಟ ಮತ್ತು ತೀವ್ರ ತ್ರಾಸದಾಯಕ ಎನಿಸಿದರೆ ತಪ್ಪಿಸಿಕೊಳ್ಳಬೇಕಾದ ದೊಡ್ಡ ಬೆಟ್ಟ ಇದು ಸಾವನದುರ್ಗ.

ಬೆಂಗಳೂರಿನಿಂದ 46 ಕಿ.ಮೀ ದೂರವಿರುವ, ಒಂದು ದಿನದಲ್ಲಿ ಹೋಗಿಬರಬಹುದಾದ ಸ್ಥಳಗಳ ಪಟ್ಟಿಗೆ ಸಾವನದುರ್ಗ ಸೇರುತ್ತದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಈ ಏಕಶಿಲಾ ಬೆಟ್ಟ ಸಮುದ್ರ ಮಟ್ಟದಿಂದ 1226 ಮೀಟರ್ ಎತ್ತರದಲ್ಲಿದೆ. ಬೆಂಗಳೂರಿನಿಂದ ಮಾಗಡಿ ರಸ್ತೆ ಮಾರ್ಗವಾಗಿ ಹೊರಟು, ದೊಡ್ಡ ಆಲದಮರ-ಮಂಚನಬೆಲೆ ಡ್ಯಾಂ ಮಾರ್ಗವಾಗಿ ಸಾವನದುರ್ಗ ತಲುಪಬಹುದು. ನೀವು ಮಂಚನಬೆಲೆ ಅಣೆಕಟ್ಟು ಮಾರ್ಗವಾಗಿ ಹೋದರೆ, ದೊಡ್ಡ ಆಲದಮರ, ಮಂಚನಬೆಲೆ ಅಣೆಕಟ್ಟು ನೋಡುವುದರ ಜೊತೆಗೆ ನಿರ್ಜನ ಕಾನನದ ನಿಶಬ್ದವನ್ನು ಅನುಭವಿಸಬಹುದು. ಕಾರು-ಬೈಕ್‌ನಲ್ಲಿ ಬೆಟ್ಟದ ದಡ ತಲುಪಲು ಒಂದೂವರೆ ಗಂಟೆ ಸಾಕು.

ನೀವು ದಟ್ಟಕಾನನದ ನಡುವಿನ ಸಾವನದುರ್ಗ ಬೆಟ್ಟ ತಲುಪಿದೊಡನೆಯೇ ವಿಸ್ತಾರವಾದ ಉದ್ಯಾನವನವೊಂದು ನಿಮ್ಮನ್ನು ಸ್ವಾಗತಿಸುತ್ತದೆ. ಕೇವಲ 10 ರೂ ಟಿಕೆಟ್ ಇರುವ ಈ ಉದ್ಯಾನವನ ಮಕ್ಕಳಿಗೆ ಆಟವಾಡಲು ಪ್ರಸಕ್ತವಾಗಿದೆ. ವಿಭಿನ್ನ ಗಿಡಮರಗಳು, ಆಟದ ಸಾಮಗ್ರಿಗಳು ಅಲ್ಲಿದ್ದು ಮಕ್ಕಳು ಆಡುತ್ತಿರುವಾಗ, ಹಿರಿಯರಿಗೆ ಗಂಟೆಗಟ್ಟಲೆ ವಿಶ್ರಾಂತಿ ಪಡೆಯಲು ಇದು ಉತ್ತಮ ಸ್ಥಳವೆನಿಸಿದೆ. ಪ್ರಶಾಂತವಾದ ಈ ಸ್ಥಳದಲ್ಲಿ ನೀವು ಧ್ಯಾನಸ್ಥರಾಗಬಹುದು. ಇನ್ನು ಸಾವಂದಿ ವೀರಭದ್ರೇಶ್ವರದೇವಾಲಯ ಮತ್ತು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿದ್ದರೆ ನಂದಿ ದೇವಾಲಯವು ಬೆಟ್ಟದ ತುತ್ತತುದಿಯಲ್ಲಿದೆ.

ನಾನು ಬೈಕಿನಲ್ಲಿ ಬೆಟ್ಟ ತಲುಪಿದೊಡನೆ ಅನ್ನಿಸಿದ್ದು ಇಷ್ಟ ದೊಡ್ಡ ಬೆಟ್ಟವನ್ನು ಹತ್ತಲು ಸಾಧ್ಯವೇ ಎಂದು. ಪಶ್ಚಿಮ ದಿಕ್ಕಿನಿಂದ ಅದು ನೇರಕ್ಕೆ ಬೃಹತ್ ಆಕಾರದಲ್ಲಿ ಕಾಣುತ್ತದೆ. ಇನ್ನು ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಮೆಟ್ಟಿಲುಗಳಿಲ್ಲದ ಈ ಬೆಟ್ಟ ಹತ್ತಲು ಆರಂಭಿಸಿದೆ. ಮಾರ್ಗ ತಪ್ಪದಂತೆ ಗುರುತಿನ ಚಿಹ್ನೆಗಳನ್ನು ಹಾಕಲಾಗಿದೆ. ಅವನ್ನು ಅನುಸರಿಸಿಕೊಂಡು ಏರುತ್ತಿದ್ದರೆ ದಾರಿ ಸಾಗುವುದೇ ಇಲ್ಲ. ಒಂದಷ್ಟು ದೂರ ಬೆಟ್ಟ ಹತ್ತಿ ಸುಸ್ತಾಗಿ ಕುಳಿತುಕೊಂಡರೆ ವಿಶಾಲ ಕಾಡು ಗೋಚರಿಸುತ್ತದೆ. ಮತ್ತಷ್ಟು ಹತ್ತಿದರೆ 400-500 ವರ್ಷ ಹಳೆಯ ಕೋಟೆಯೊಂದು ಪ್ರತ್ಯಕ್ಷವಾಗುತ್ತದೆ. ಅಲ್ಲಿಗೆ ಒಂದು ಬೆಟ್ಟ ಮುಕ್ತಾಯವಾಗಿ, ಅಲ್ಲಿಂದ ನಂದಿ ವಿಗ್ರಹವಿರುದ ದೊಡ್ಡ ಬೆಟ್ಟಕ್ಕೆ ದಾರಿಯಿದೆ.

ಆಗಾಗ ವಿಶ್ರಾಂತಿ ಪಡೆದು ಬೆಟ್ಟ ಹತ್ತುವುದು ಸುಲಭವಾದೀತು. ವೃತ್ತಿಪರ ಚಾರಣಿಗರು ಸರಸರನೇ ಬೆಟ್ಟ ಏರಬಹುದು. ಸಾಮಾನ್ಯವಾಗಿ ಪೂರ್ತಿ ಬೆಟ್ಟ ಹತ್ತಲು ಒಂದೂವರೆಯಿಂದ-ಎರಡು ಗಂಟೆಗಳ ಸಮಯ ಬೇಕು. ಕಷ್ಟಪಟ್ಟು ಬೆಟ್ಟ ಪೂರ್ತಿ ಹತ್ತಿದ ಮೇಲಂತೂ ಸುತ್ತಲಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುವುದು ವಿಶಿಷ್ಟ ಅನುಭವವೆಂದು ಬೆಟ್ಟ ಹತ್ತಿರುವವರು ಹೇಳುತ್ತಾರೆ. ನಾನಂತೂ ಮೊದಲ ಬಾರಿಗೆ ಪೂರ್ತಿ ಬೆಟ್ಟ ಹತ್ತಲು ಹೋಗಲಿಲ್ಲ. ಏಕೆಂದರೆ ಬೆಟ್ಟ ಹತ್ತಲು ಬೇಕಿರುವಷ್ಟು ಶಕ್ತಿ ಇಳಿಯಲೂ ಬೇಕಿರುತ್ತದೆ. ಹಾಗಾಗಿ ತೀರಾ ಸುಸ್ತಾಗುವುದು ಬೇಡ ಎಂದು ಈ ಮೊದಲ ಚಾರಣದಲ್ಲಿ, ಬೆಟ್ಟದ ಕೋಟೆಯವರೆಗೆ ಹತ್ತಿ ವಿಶ್ರಾಂತಿಗೆ ಮುಂದಾದೆ.

ಮನೆಮಂದಿಯೆಲ್ಲ ಬೆಟ್ಟ ಹತ್ತುವುದು ಹೆಚ್ಚಿನ ಖುಷಿ ಕೊಡುತ್ತದೆ. ಎಷ್ಟು ಸಾಧ್ಯವೋ ಅಷ್ಟು ಮೇಲೇರಿ ಒಟ್ಟಿಗೆ ಊಟ ಮಾಡಿ, ವಿಶ್ರಾಂತಿ ತೆಗೆದುಕೊಂಡು ಕೆಳಗಿಳಿಯಬಹುದು. ಬೆಟ್ಟದ ಮೇಲೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾದ್ದರಿಂದ ತಿಂಡಿ ಜೊತೆಗೆ ಹೆಚ್ಚು ನೀರು ಒಯ್ಯುವುದು ಕಡ್ಡಾಯ.

ಚಳಿಗಾಲದಲ್ಲಿ ಮಂಜಿನ ಮುಸುಕು ಹೊದ್ದು ಕಂಗೊಳಿಸುವ ಈ ಬೆಟ್ಟದ ತುದಿಯಲ್ಲಿ, ಮಧ್ಯಾಹ್ನ ನಿಂತು ನೋಡಿದರೆ ಮೋಡಗಳು ಇರದಿದ್ದಲ್ಲಿ ಸುತ್ತಲಿನ ಹಲವಾರು ಕೆರೆ ಮತ್ತು ಬೆಟ್ಟಗಳು ಕಾಣಸಿಗುತ್ತವೆ. ಸಾವನದುರ್ಗ ಕಾಡಿನ ಮನೋಹರ ದೃಶ್ಯ ಕಾಣುತ್ತದೆ.

ಸಾವಂಡಿ, ಸಾಮಂತದುರ್ಗ, ಸಾವಿನ ದುರ್ಗ ಎಂದೆಲ್ಲಾ ಕರೆಯಲ್ಪಡುತ್ತಿದ್ದ ಈ ಊರನ್ನು ಹಲವು ರಾಜರು ವಶಪಡಿಸಿಕೊಂಡು ಆಳಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಇದರ ಬಳಿ ಇರುವ ಮಾಗಡಿಯನ್ನು ಕೆಂಪೇಗೌಡರು ಸೇರಿದಂತೆ ಹಲವರು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬ್ರಿಟಿಷರು ನಂತರ ಇದನ್ನು ವಶಪಡಿಸಿಕೊಂಡಿದ್ದರು. ಈಗ ಸರ್ಕಾರ ಈ ಕಾಡನ್ನು ರಕ್ಷಿಸುವ ಹೊಣೆ ಹೊತ್ತುಕೊಂಡಿದೆ.

ದಾರಿಯಲ್ಲಿ ಸಿಗುವ ದೊಡ್ಡ ಆಲದ ಮರ ಮಂಚನಬೆಲೆ ಅಣೆಕಟ್ಟಿನ ಆಕರ್ಷಣೆಯ ಜೊತೆಗೆ, ದಾರಿಯುದ್ದಕ್ಕೂ ಘಮ ಘಮ ಫಿಶ್ ಫ್ರೈ ಮಾಡಿಕೊಡುವ ಸಾಲು-ಸಾಲು ಅಂಗಡಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಮೀನಿನ ರುಚಿ ಸವಿಯುವುದನ್ನು ಮರೆಯದಿರಿ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...