Homeಕರ್ನಾಟಕಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

- Advertisement -
- Advertisement -

ಸ್ಲಂ ಬೋರ್ಡ್ ಅಧಿಕಾರಿಗಳಿಂದ ಎತ್ತಂಗಡಿಗೆ ಒಳಗಾಗಿರುವ ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ ಸ್ಲಂನ 86 ಕುಟುಂಬಗಳು ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿದ್ದಾರೆ. ಇಂದು ತಮ್ಮನ್ನು ಒಕ್ಕಲೆಬ್ಬಿಸಿದ ಬೆಂಗಳೂರಿನ ಸ್ಲಂ ಬೋರ್ಡ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೆ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿರುವುದರಿಂದ ಕಂಗಲಾಗಿರುವ ಈ ಜನರು, ಸ್ಲಂ ಬೋರ್ಡ್ ಅಧ್ಯಕ್ಷರು ಬಂದು ಪುನರ್ವಸತಿ ವ್ಯವಸ್ಥೆ ಕಲ್ಪಿಸುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಹಲವಾರು ವರ್ಷಗಳಿಂದ ಕೃಷ್ಣಪ್ಪ ಗಾರ್ಡನ್‌ನಲ್ಲಿ ವಾಸವಿದ್ದ 86 ಕುಟುಂಬಗಳ 300 ಕ್ಕೂ ಹೆಚ್ಚು ಜನರನ್ನು ಒಕ್ಕಲೆಬ್ಬಿಸಲಾಗಿದೆ. ತಮ್ಮ ಮನೆಗಳನ್ನು ಉಳಿಸಿಕೊಳ್ಳಲು ಮುಂದಾದ ಬಡಜನರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ, ಕಾಲಿನಿಂದ ಒದ್ದು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಜನರಿಗಾಗಿಯೇ ಮಾರತ್ತಹಳ್ಳಿಯಲ್ಲಿ 313 ಮನೆಗಳನ್ನು ಸ್ಲಂ ಬೋರ್ಡ್ ನಿರ್ಮಿಸಿದೆ. ಅವುಗಳನ್ನು 303 ಮನೆಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ ಅಧಿಕಾರಿಗಳು ಲಂಚ ಕೊಟ್ಟವರಿಗೆ, ಹಣ ಕೊಟ್ಟವರಿಗೆ ಎರಡೆರಡು ಮನೆ ನೀಡಿದ್ದಾರೆ. ಈ 86 ಕುಟುಂಬಗಳ ಬಡಜನರನ್ನು ನಿರ್ಲಕ್ಷಿಸಲಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸದೆ ನಿನ್ನೆ ಏಕಾಏಕಿ ಬೀದಿಪಾಲು ಮಾಡಲಾಗಿದೆ. ಮನೆ ಇಲ್ಲದ ಈ ಜನ ನಿನ್ನೆ ಸ್ನೇಹಿತರೊಬ್ಬರ ಕಚೇರಿಯಲ್ಲಿ ಮಲಗಿ ಇಂದು ಪ್ರತಿಭಟನೆಗೆ ಬಂದಿದ್ದಾರೆ ಎಂದು ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷರಾದ ಕೆ.ಮರಿಯಪ್ಪನವರು ತಿಳಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಅವರು, “ಈ ಜನರು ಅದೇ ಸ್ಥಳದ ವಿಳಾಸ ನೀಡಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ರೇ‍ಷನ್ ಕಾರ್ಡ್ ಪಡೆದಿದ್ದಾರೆ. ಈಗ ಅವರನ್ನು ಒಕ್ಕಲೆಬ್ಬಿಸಿರುವುದರಿಂದ ಮುಂದೇನು ಮಾಡಬೇಕೆಂದು ತೋಚದೆ ಕುಳಿತಿದ್ದಾರೆ. ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಲಂ ಬೋರ್ಡ್ ಅಧ್ಯಕ್ಷರು ಇತ್ತ ಸುಳಿದಿಲ್ಲ. ಸರ್ಕಾರ ಈ ಬಡವರನ್ನು ನಿರ್ಲಕ್ಷ್ಯ ಮಾಡದೆ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು” ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...