Homeಮುಖಪುಟ11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ಇಂದು ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ. ಅವರು ಬಂದ ನಂತರ ಸರ್ಕಾರದ ಕಾಯ್ದೆ ತಡೆಹಿಡಿಯುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು ಮತ್ತು ಸಭೆ ಮುಗಿಸಲು ತರಾತುರಿ ಮಾಡಿದರು. ಇದನ್ನು ನಾವು ಒಪ್ಪಲಿಲ್ಲ. ಹಾಗಾಗಿ ನಮ್ಮ ಆಂದೋಲನವು ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಎಸ್.ಎಸ್. ಪಂಧರ್‌ರವರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

“ಸಭೆಯಲ್ಲಿ ಕೃಷಿ ಕಾನೂನುಗಳ ಅನುಷ್ಠಾನವನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಾಗಿ ಸಚಿವರು ತಿಳಿಸಿದರು. ಅಲ್ಲದೇ ಈ ಪ್ರಸ್ತಾಪವನ್ನು ರೈತ ಸಂಘಗಳು ಒಪ್ಪಿಕೊಳ್ಳಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಯಬಹುದು ಎಂದು ಹೇಳಿದರು. ನಾವು ಅದನ್ನು ಒಪ್ಪಿಕೊಂಡಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಮತ್ತು ನಿಗಧಿಯಂತೆ ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳ ಪ್ರತಿಕ್ರಿಯೆ ಗೌರವಯುತವಾಗಿರಲಿಲ್ಲ. ಹಾಗಾಗಿ ರೈತ ಮುಖಂಡರು ಟ್ರಾಕ್ಟರ್ ರ್ಯಾಲಿ ನಡೆಸುವ ಮತ್ತು ಹೋರಾಟವನ್ನು ತೀವ್ರಗೊಳಿಸುವುದಾಗಿ ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.

ರೈತ ಒಕ್ಕೂಟಗಳ ಕಡೆಯಿಂದ ‘ರೈತರ ಕಲ್ಯಾಣದ ಕಾಳಜಿ ಇಲ್ಲದೆ ಕಾರಣ’ ಮಾತುಕತೆ ಅನಿರ್ದಿಷ್ಟವಾಗಿತ್ತು. ನಾನು ಅದರ ಬಗ್ಗೆ ದುಃಖಿತನಾಗಿದ್ದೇನೆ. ಸರ್ಕಾರವು ಪರ್ಯಾಯಗಳನ್ನು ಹೇಳಿದರೂ, ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈತ ಸಂಘಗಳು ಬಯಸುತ್ತವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ತಿಳಿಸಿದ್ದಾರೆ.

ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ. ಇಂದಿನ 11 ನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪೊಲೀಸ್ ಮುಖ್ಯಸ್ಥರೊಂದಿಗೆ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

ನಮ್ಮ ಪೆರೇಡ್ ಕೂಡ ಗಣರಾಜ್ಯೋತ್ಸವದ ಪೆರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...