Homeಮುಖಪುಟ11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ಇಂದು ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಸಚಿವರು ನಮ್ಮನ್ನು ಮೂರೂವರೆ ಗಂಟೆಗಳ ಕಾಲ ಕಾಯುವಂತೆ ಮಾಡಿದರು. ಇದು ರೈತರಿಗೆ ಮಾಡಿದ ಅವಮಾನ. ಅವರು ಬಂದ ನಂತರ ಸರ್ಕಾರದ ಕಾಯ್ದೆ ತಡೆಹಿಡಿಯುವ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು ಮತ್ತು ಸಭೆ ಮುಗಿಸಲು ತರಾತುರಿ ಮಾಡಿದರು. ಇದನ್ನು ನಾವು ಒಪ್ಪಲಿಲ್ಲ. ಹಾಗಾಗಿ ನಮ್ಮ ಆಂದೋಲನವು ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಎಸ್.ಎಸ್. ಪಂಧರ್‌ರವರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

“ಸಭೆಯಲ್ಲಿ ಕೃಷಿ ಕಾನೂನುಗಳ ಅನುಷ್ಠಾನವನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಾಗಿ ಸಚಿವರು ತಿಳಿಸಿದರು. ಅಲ್ಲದೇ ಈ ಪ್ರಸ್ತಾಪವನ್ನು ರೈತ ಸಂಘಗಳು ಒಪ್ಪಿಕೊಳ್ಳಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಯಬಹುದು ಎಂದು ಹೇಳಿದರು. ನಾವು ಅದನ್ನು ಒಪ್ಪಿಕೊಂಡಿಲ್ಲ, ಹೋರಾಟ ತೀವ್ರಗೊಳಿಸುತ್ತೇವೆ ಮತ್ತು ನಿಗಧಿಯಂತೆ ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳ ಪ್ರತಿಕ್ರಿಯೆ ಗೌರವಯುತವಾಗಿರಲಿಲ್ಲ. ಹಾಗಾಗಿ ರೈತ ಮುಖಂಡರು ಟ್ರಾಕ್ಟರ್ ರ್ಯಾಲಿ ನಡೆಸುವ ಮತ್ತು ಹೋರಾಟವನ್ನು ತೀವ್ರಗೊಳಿಸುವುದಾಗಿ ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.

ರೈತ ಒಕ್ಕೂಟಗಳ ಕಡೆಯಿಂದ ‘ರೈತರ ಕಲ್ಯಾಣದ ಕಾಳಜಿ ಇಲ್ಲದೆ ಕಾರಣ’ ಮಾತುಕತೆ ಅನಿರ್ದಿಷ್ಟವಾಗಿತ್ತು. ನಾನು ಅದರ ಬಗ್ಗೆ ದುಃಖಿತನಾಗಿದ್ದೇನೆ. ಸರ್ಕಾರವು ಪರ್ಯಾಯಗಳನ್ನು ಹೇಳಿದರೂ, ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈತ ಸಂಘಗಳು ಬಯಸುತ್ತವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ತಿಳಿಸಿದ್ದಾರೆ.

ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ. ಇಂದಿನ 11 ನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪೊಲೀಸ್ ಮುಖ್ಯಸ್ಥರೊಂದಿಗೆ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

ನಮ್ಮ ಪೆರೇಡ್ ಕೂಡ ಗಣರಾಜ್ಯೋತ್ಸವದ ಪೆರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.


ಇದನ್ನೂ ಓದಿ: ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...