Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...