Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...