Homeಮುಖಪುಟಮೋದಿ ಸರ್ಕಾರಕ್ಕಾದ ಎರಡು ಭಾರಿ ಹಿನ್ನಡೆಗಳು: ಆದರವು ಹಿನ್ನಡೆ ಅನಿಸುತ್ತಿಲ್ಲ!

ಮೋದಿ ಸರ್ಕಾರಕ್ಕಾದ ಎರಡು ಭಾರಿ ಹಿನ್ನಡೆಗಳು: ಆದರವು ಹಿನ್ನಡೆ ಅನಿಸುತ್ತಿಲ್ಲ!

ಕೃಷಿ ಕಾಯ್ದೆಗಳನ್ನು ತಡೆಯುವ ಮತ್ತು ಸಿಎಎ ಪ್ರಕ್ರಿಯೆ ಆರಂಭಿಸದಿರುವ ಎರಡೂ ನಿದರ್ಶನಗಳು ಸರ್ಕಾರದ ಹಿನ್ನಡೆಗಳೇ ಆಗಿವೆ. ಆದರೆ ಅವು ಹಿನ್ನಡೆಗಳಂತೆ ಕಾಣುತ್ತಿಲ್ಲವೇಕೆ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ, ಅವರು ತಮ್ಮ ಮೊದಲ ಪ್ರಯತ್ನಗಳಲ್ಲಿ ಒಂದನ್ನು ಹಿಂದಕ್ಕೆ ಪಡೆದರು. ಕೈಗಾರಿಕೆಗಳಿಗೆ ಭೂಸ್ವಾಧೀನ ಕಾನೂನನ್ನು ತಿದ್ದುಪಡಿ ಮಾಡುವುದು ಆ ಮೊದಲ ಪ್ರಯತ್ನವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕಲು ಯಶಸ್ವಿಯಾದ ಅಪರೂಪದ ಕ್ಷಣವೆಂದು ಇಂದಿಗೂ ಈ ಕ್ರಮವನ್ನು ಪರಿಗಣಿಸಲಾಗಿದೆ. ಮೋದಿಯವರನ್ನು “ಸೂಟ್-ಬೂಟ್ ಸರ್ಕಾರ್” ಎಂದು ಕರೆದಿದ್ದ ರಾಹುಲ್, ಇದು ಕಾರ್ಪೊರೇಟ್ ಭಾರತದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಮತ್ತು ಜನಸಾಮಾನ್ಯರ ಹಿತಾಸಕ್ತಿಗಲ್ಲ ಎಂದು ಪ್ರಬಲ ವಿರೋಧ ವ್ಯಕ್ತ ಮಾಡಿದ್ದರು.

ಎರಡನೆಯ ಅವಧಿಯಲ್ಲಿ, ಮೋದಿಯವರು ಈಗಾಗಲೇ ಅಂತಹ ಎರಡು ರೀತಿಯ ಹಿನ್ನಡೆಗಳನ್ನು ಕಂಡಿದ್ದಾರೆ, ಆದರೆ ಅವು ಹಿನ್ನಡೆಗಳಂತೆ ಕಾಣದ ರೀತಿಯಲ್ಲಿ ಮ್ಯಾನೇಜ್ ಮಾಡಿದ್ದಾರೆ.

ಕೃಷಿ ಕಾನೂನು ಪ್ರಕರಣದಲ್ಲಿ ಅರ್ಜಿದಾರರೊಬ್ಬರ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ಕೃಷಿ ಕಾನೂನುಗಳ ಅನುಷ್ಠಾನವನ್ನು ತಡೆಯುವ ಸುಪ್ರೀಂ ಕೋರ್ಟ್‌ನ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು. ಸ್ಥಗಿತವನ್ನು “ರಾಜಕೀಯ ವಿಜಯ” ಎಂದು ನೋಡಬಾರದು ಮತ್ತು ಪ್ರತಿಭಟನಾಕಾರರು ತಾವು “ಈ ಸುತ್ತನ್ನು ಗೆದ್ದಿದ್ದೇವೆ” ಎಂದು ಭಾವಿಸಬಾರದು ಎಂದು ಹೇಳಿದರು.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಕೃಷಿ ಕಾನೂನುಗಳನ್ನು ಅಮಾನತುಗೊಳಿಸುವುದರ ಬಗ್ಗೆ ಸಾಳ್ವೆಯವರಿಗೆ ಹೆಚ್ಚಿನ ಚಿಂತೆಯಿಲ್ಲ, ಆದರೆ ಹಾಗೆ ಮಾಡಿದರೆ ಭಾರತದ ರೈತರು ಅದನ್ನು ‘ಗೆಲುವು” ಎಂದು ನೋಡುತ್ತಾರೆ ಎಂಬುದು ಅವರ ಚಿಂತೆ. ಅಂದರೆ ಅದು ಸರ್ಕಾರಕ್ಕಾದ ಮುಖಭಂಗ ಎಂಬುದು ಅವರ ಚಿಂತೆಯ ಮೂಲ.

ಕೃಷಿ ಕಾನೂನುಗಳು ಶೀಘ್ರದಲ್ಲೇ ಜಾರಿಯಾಗುತ್ತಿಲ್ಲ. ಅನುಷ್ಠಾನವನ್ನು ಒಂದೂವರೆ ವರ್ಷಗಳವರೆಗೆ ಸ್ಥಗಿತಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಲಾಗಿದೆ. ಇದು ಸರ್ಕಾರಕ್ಕೆ ಹಿನ್ನಡೆಯಂತೆ ಕಾಣದಿರಲು ಕಾರಣ, ಕಾನೂನುಗಳನ್ನು ರದ್ದುಗೊಳಿಸಲಾಗಿಲ್ಲ. ಅವನ್ನು ಹಿಂದಕ್ಕೆ ಪಡೆಯುವ ಮಾತನ್ನು ಆಡಿಲ್ಲ. ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪ್ರತಿಭಟಿಸುತ್ತಿರುವವರ ಬೇಡಿಕೆಯ ಮುಂದೆ ರಾಜಕೀಯವಾಗಿ ಶರಣಾಗಲಿಲ್ಲ ಎಂದು ಸರ್ಕಾರ ಹೇಳಬಹುದು. ಈ ಸಂದರ್ಭದಲ್ಲಿ ರೈತರು ಬಿಗಿ ನಿಲುವಿಗೆ ಅಂಟಿಕೊಂಡಿದ್ದರೂ ಕೂಡ ಎರಡೂ ಕಡೆಯವರು ಗೆದ್ದೆವು ಎಂದು ಅಂದುಕೊಳ್ಳಬಹುದು.
ಮುಖ ಉಳಿಸಿಕೊಳ್ಳುವ ಸರ್ಕಾರದ ಈ ನಿರ್ಗಮನವು ಒಂದು ಹಿನ್ನಡೆಯೇ ಆಗಿದೆ. ವಾಸ್ತವದ ಸಂಗತಿಯೆಂದರೆ, ಹೊಸ ಕೃಷಿ ಕಾನೂನುಗಳಿಂದ ತೊಂದರೆಗೊಳಗಾದ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಂಡಿಗಳನ್ನು ನಾವು ನೋಡಲು ಹೋಗುವುದಿಲ್ಲ. ಕೃಷಿ ಮಾರಾಟವನ್ನು ಖಾಸಗೀಕರಣಗೊಳಿಸುವುದು ಸರ್ಕಾರದ ಉದ್ದೇಶವಾಗಿದ್ದರೆ, ಅದು ಆಗುತ್ತಿಲ್ಲ. ಕನಿಷ್ಠ 2021 ರಲ್ಲಿ ಅಂತೂ ಸಾಧ್ಯವಿಲ್ಲ. ಕನಿಷ್ಠ ಫೆಬ್ರವರಿ-ಮಾರ್ಚ್ 2022 ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯವರೆಗೂ ಅದು ಸಂಭವಿಸಲಾರದು. ತದನಂತರ ಲೋಕಸಭಾ ಚುನಾವಣೆಯು ತುಂಬಾ ಹತ್ತಿರದಲ್ಲಿರುತ್ತದೆ.

ಸಿಎಎ, ಕೊರೊನಾ: ಅಸ್ಸಾಂ-ಬಂಗಾಳ ಚುನಾವಣೆ

ಅಂತೆಯೇ, 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಈಗ ರಾಜಕೀಯ ಚರ್ಚೆಯಿಂದ ಹೊರಬಂದಿದೆ. ಇದು ಕೂಡ ಮಹತ್ವದ ಕಾನೂನೇ. ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕೂಡ ಹಿನ್ನಡೆ ಅನುಭವಿಸಿದೆ. ಕೋವಿಡ್ ಕಾರಣಕ್ಕೆ ಕೇವಲ ಎನ್‌ಪಿಆರ್ ಮಾತ್ರವಲ್ಲ ಜನಗಣತಿಯನ್ನು ಕೂಡ ನಿಲ್ಲಿಸಿದ್ದಾರೆ.

ಎನ್‌ಆರ್‌ಸಿ-ಎನ್‌ಪಿಆರ್-ಸಿಎಎ ಕಾನೂನುಗಳ ವಿರುದ್ಧ 2019 ರಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ನಡೆಸುವ ಉದ್ದೇಶವನ್ನು ಎಂದಿಗೂ ಹೊಂದಿಲ್ಲ ಎಂದು ಸರ್ಕಾರ ನಟಿಸಿತು. ಆದರೆ ಈಗ ಅವರು ಸಿಎಎಗೆ ಹಿಂದಿರುಗಿದ್ದಾರೆಂದು ತೋರುತ್ತದೆಯಾದರೂ ಅದರ ಲಕ್ಷಣಗಳು ದಟ್ಟವಾಗಿಲ್ಲ. ಕೃಷಿ ಕಾನೂನುಗಳಂತೆ, ಸಿಎಎ ಕಾನೂನಾಗಿ ಉಳಿಯುತ್ತದೆ. ಕಾನೂನನ್ನು ಕಾರ್ಯಗತಗೊಳಿಸಲು ಸರ್ಕಾರವು ನಿಯಮಗಳನ್ನು ಬಿಡುಗಡೆ ಮಾಡದ ಕಾರಣ ಅದನ್ನೇನೂ ಕಾನೂನು ದಸ್ತಾವೇಜಿನಿಂದ ಪುಸ್ತಕಗಳಿಂದ ತೆಗೆದುಹಾಕಬೇಕಾಗಿಲ್ಲ.

ಇದನ್ನೂ ಓದಿ:  ಸಿಎಎ ಜಾರಿ ವಿಳಂಬ: ನಿಯಮ ರೂಪಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರ

ಆದ್ದರಿಂದ, ಸೈದ್ಧಾಂತಿಕವಾಗಿ, ಸರ್ಕಾರವು ಯಾವುದೇ ಹೊತ್ತಿನಲ್ಲಿ ಸಿಎಎ ನಿಯಮಗಳನ್ನು ತರಬಹುದು. ಆದರೆ ಅದು ಅಸ್ಸಾಂ, ಪಶ್ಚಿಮ ಬಂಗಾಳ ಚುನಾವಣೆಗಳಲ್ಲಿ ತಿರುಗುಬಾಣ ಆಗಬಹುದು ಎಂಬ ಭಯದಲ್ಲಿ ಸರ್ಕಾರವಿದೆ.

ಗೃಹ ಸಚಿವ ಅಮಿತ್ ಶಾ ಡಿಸೆಂಬರ್‌ನಲ್ಲಿ, “ಸಿಎಎ ನಿಯಮಗಳನ್ನು ಇನ್ನೂ ರೂಪಿಸಿಲ್ಲ, ಏಕೆಂದರೆ ಕೊರೊನಾ ಕಾರಣದಿಂದಾಗಿ ಇಂತಹ ಬೃಹತ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ವ್ಯಾಕ್ಸಿನೇಷನ್ ಪ್ರಾರಂಭವಾದ ತಕ್ಷಣ ನಾವು ಅದನ್ನು ಪರಿಗಣಿಸುತ್ತೇವೆ” ಎಂದಿದ್ದನ್ನು ಗಮನಿಸಿ.

ಪ್ರತಿಭಟನೆಯ ಶಕ್ತಿ

ಕೃಷಿ ಕಾಯ್ದೆಗಳನ್ನು ತಡೆಯುವ ಮತ್ತು ಸಿಎಎ ಪ್ರಕ್ರಿಯೆ ಆರಂಭಿಸದಿರುವ ಎರಡೂ ನಿದರ್ಶನಗಳು ಸರ್ಕಾರದ ಹಿನ್ನಡೆಗಳೇ ಆಗಿವೆ. ಈ ಹಿನ್ನಡೆಗಳಿಗೆ ಕಾರಣ ಅಂತಾ ಒಂದಿದ್ದರೆ ಅದು ಸಾರ್ವಜನಿಕರ ಪ್ರತಿಭಟನೆಯಾಗಿದೆ. ಸಂಸತ್ತು, ಪ್ರತಿಪಕ್ಷಗಳು, ಮಾಧ್ಯಮಗಳು, ನ್ಯಾಯಾಂಗ – ಇಂದು ಯಾವುದೇ ಸಂಸ್ಥೆಗಳು ಸಮತೋಲನದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಇದಕ್ಕಾಗಿಯೇ ಪ್ರತಿಭಟನೆ – ಶಾಂತಿಯುತ ಪ್ರತಿಭಟನೆ – ಪ್ರಜಾಪ್ರಭುತ್ವದ ಕೇಂದ್ರಬಿಂದುವಾಗಿದೆ, ಮತ್ತು ಇದಕ್ಕಾಗಿಯೇ ಪ್ರತಿಭಟನಾಕಾರರನ್ನು ಅತ್ಯಂತ ಕಠಿಣ ಕಾನೂನುಗಳ ಅಡಿಯಲ್ಲಿ ಗುರುತಿಸಿ ಅನೇಕ ಪ್ರಕರಣಗಳೊಂದಿಗೆ ತಳುಕು ಹಾಕಿ ಬಂಧನ ಮಾಡಲಾಗುತ್ತಿದೆ.

ಕೃಪೆ: ಶಿವಂ ವಿಜ್ (ದಿ ಪ್ರಿಂಟ್)


ಇದನ್ನೂ ಓದಿ: ಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...