Homeಕರ್ನಾಟಕRSS, BJP ನಾಯಕರ ಹೆಸರೇಳಿಕೊಂಡು ವಂಚನೆ: ಯುವರಾಜ್ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ

RSS, BJP ನಾಯಕರ ಹೆಸರೇಳಿಕೊಂಡು ವಂಚನೆ: ಯುವರಾಜ್ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಹೆಸರು ಹೇಳಿಕೊಂಡು ಹಲವಾರು ಜನರಿಗೆ ವಂಚನೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ, ಆರ್. ಯುವರಾಜ್ ಅಲಿಯಾಸ್ ಸಂಗನಬಸವ ಸೇವಾಲಾಲ್ ಸ್ವಾಮಿಗೆ ಸೇರಿರುವ ಸುಮಾರು 70 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ 67ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ.

ಆರೋಪಿ ಸ್ವಾಮಿ ವಿರುದ್ದ ಬೆಂಗಳೂರಿನಾದ್ಯಂತ ಸುಮಾರು 14 ವಂಚನೆ ಪ್ರಕರಣ ದಾಖಲಾಗಿದೆ. ಅವನನ್ನು ಡಿಸೆಂಬರ್ 17 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವರಿಗೆ ರಾಜ್ಯಸಭಾ ಸೀಟು ಕೊಡಿಸುತ್ತೇನೆಂದು 10 ಕೋಟಿ ರೂ. ಕೇಳಿದ್ದ ಸ್ವಾಮಿ ಮುಂಗಡವಾಗಿ 1 ಕೋಟಿ ರೂ. ಪಡೆದುಕೊಂಡಿದ್ದ. ಈ ಹಿನ್ನಲೆಯಲ್ಲಿ ಮೋಸ ಹೋಗಿದ್ದ ಉದ್ಯಮಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಸಿಸಿಬಿ ಪೊಲೀಸರು, ಆರೋಪಿ ಮತ್ತು ಅವರ ಪತ್ನಿ ಎನ್‌.ಪ್ರೇಮಾ ಅವರ ಹೆಸರಿಗಿದ್ದ 26 ಆಸ್ತಿಗಳನ್ನು ಪಟ್ಟಿ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್. ಪಾಟೀಲ, ‘‘ಸಾರ್ವಜನಿಕರನ್ನು ವಂಚಿಸಿ ಗಳಿಸಿದ್ದ ಹಣದಲ್ಲೇ ಆರೋಪಿ, ಪತ್ನಿ ಹೆಸರಿನಲ್ಲಿ 70 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದನೆ ಮಾಡಿದ್ದಾರೆ. ಸಿಸಿಬಿ ಅಧಿಕಾರಿಗಳು ಈ ಸಂಬಂಧ ದಾಖಲೆ ಹಾಗೂ ಪುರಾವೆಗಳನ್ನು ಸಂಗ್ರಹಿಸಿದ್ದು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಿ, ವಂಚನೆಗೀಡಾದವರಿಗೆ ನ್ಯಾಯ ಒದಗಿಸಬೇಕು” ಎಂದು ಕೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಆರೋಪಿಗೆ ಸೇರಿದ್ದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.

‘‘ಸರ್ಕಾರದ ವಿವಿಧ ಮಂಡಳಿಗಳಲ್ಲಿ ಅಧ್ಯಕ್ಷ ಹುದ್ದೆ, ಸರ್ಕಾರದ ಇಲಾಖೆಗಳಲ್ಲಿ ಕೆಲಸ, ಪ್ರತಿಷ್ಠಿತ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟು ಹಾಗೂ ಸರ್ಕಾರದಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡಿದ್ದ ಆರೋಪಿ ಯುವರಾಜ್, ಕೋಟ್ಯಂತರ ರೂಪಾಯಿ ಪಡೆದಿದ್ದರು’’ ಎಂದು ಸಿಸಿಬಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಆರೋಪಿಯು ಹಲವಾರು ಪ್ರಮುಖ ರಾಜಕಾರಣಿಗಳೊಂದಿಗೆ ಸಂಪರ್ಕ ಹೊಂದಿದ್ದು ರಾಜ್ಯ ಸರ್ಕಾರದ ಸಚಿವರೊಬ್ಬರ ಮನೆಯ ದೇವರ ಕೋಣೆಯನ್ನೇ ಬದಲಾವಣೆ ಮಾಡಿದ್ದ ಎಂದು ಹೇಳಲಾಗುತ್ತದೆ. ಸಿನಿಮಾ ನಿರ್ಮಾಪಕ ಸೇರಿದಂತೆ, ರಾಜ್ಯಪಾಲೆ ಹುದ್ದೆ ಕೊಡಿಸುತ್ತೇನೆ ಎಂದು ಮಾಜಿ ನ್ಯಾಯಾಧೀಶೆಯೊಬ್ಬರಿಂದ 8.8 ಕೋಟಿ ಪಡೆದುಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ‘ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನ

ತನಗೆ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರೊಂದಿಗೆ ಸಂಪರ್ಕ ಇದೆ ಎಂದು ಆರೋಪಿಯು ಜನರಿಗೆ ಮೋಸ ಮಾಡುತ್ತಿದ್ದ. ಈಗಾಗಲೇ ಸಚಿವರಾದ ಲಕ್ಷ್ಮಣ ಸವದಿ, ವಿ.ಸೋಮಣ್ಣ, ಕಾಂಗ್ರೆಸ್ ನಾಯಕ ಕೆ.ಚಿ ವೇಣುಗೋಪಾಲ್ ಜೊತೆ ಆರೋಪಿಯು ಫೋಟೋ ಕ್ಲಿಕ್ಕಿಸಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಂಚನೆ ಮಾಡಿರುವ ಯುವರಾಜ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಅದೇ ರೀತಿ ಇದರಲ್ಲಿ ಶಾಮೀಲು ಆದವರನ್ನು ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...