Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...