Homeಕರ್ನಾಟಕ"ಹಿಂದಿ ನಮ್ಮ ರಾಷ್ಟ್ರ ಭಾಷೆ": ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

“ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

- Advertisement -
- Advertisement -

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡರಂಗೇಗೌಡರ “ಹಿಂದಿ ನಮ್ಮ ರಾಷ್ಟ್ರ ಭಾಷೆ – ತಿರಸ್ಕಾರ ಏಕೆ?” ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಸಾವಿರಾರು ಕನ್ನಡಿಗರು ಹೇಳಿಕೆ ವಿರುದ್ಧ ಮುಗಿಬಿದ್ದಿದ್ದಾರೆ.

ದೊಡ್ಡರಂಗೇಗೌಡರು ಪ್ರಜಾವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ಇಂಗ್ಲಿಷ್ ಭಾಷೆಯನ್ನು ಒಪ್ಪುವ ನಾವು ಹಿಂದಿ ಭಾಷೆಯನ್ನು ತಿರಸ್ಕರಿಸುವುದು ಏಕೆ? ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಹಿಂದಿಗೆ ಸ್ಥಾನಮಾನವಿದೆ. ಅದು ನಮ್ಮ ರಾಷ್ಟ್ರಭಾಷೆ” ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಕನ್ನಡಿಗರು ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಒಕ್ಕೂಟ ರಾಷ್ಟ್ರದಲ್ಲಿರುವ ಹಲವು ಭಾಷೆಗಳ ರೀತಿ ಅದು ಸಹ ಒಂದು ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ನೂರಾರು ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದಿ ಬಳಕೆಗೂ, ಹಿಂದಿ ಹೇರಿಕೆಗೂ ದೊಡ್ಡ ವ್ಯತ್ಯಾಸವಿದೆ. ಅದನ್ನು ತಿಳಿದುಕೊಂಡು ಮಾತನಾಡಿ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರು ಯಾವತ್ತೂ ಹಿಂದಿ ಭಾಷೆಯ ವಿರೋಧಿಗಳಲ್ಲ, ಅವರು ಏನಿದ್ದರೂ ಹಿಂದಿ ಭಾಷೆ ಹೇರಿಕೆಯ ವಿರೋಧಿಗಳು. ಇದರ ಕನಿಷ್ಠ ಜ್ಞಾನ ಇಲ್ಲದವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಹೇಗೆ? ಕನ್ನಡಿಗರ, ಕನ್ನಡದ ಮೇಲೆ ಅಭಿಮಾನ ಇದ್ದವರು ಮಾತ್ರ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಲಿ. ಅಧ್ಯಕ್ಷರು_ಬದಲಾಗಲಿ ಎಂದು ಫೈಜಲ್ ಎಂಬುವವರು ಒತ್ತಾಯಿಸಿದ್ದಾರೆ.

#ಹಿಂದಿಹೇರಿಕೆ ಬಗ್ಗೆ ತುಟಿ ಬಿಚ್ಚದ ದೊಡ್ಡಮನುಷ್ಯ ಕನ್ನಡ ಅಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ. #ಹಿಂದಿ ರಾಷ್ಟ್ರೀಯ ಭಾಷೆ ಅನ್ನುವ ದೊಡ್ಡಮನುಷ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ. 35000 ಗುಡಿಗಳನ್ನ ಕಟ್ಟಬೇಕು ಅನ್ನೋ ದೊಡ್ಡಮನುಷ್ಯ ಸಮಾಜದ ಹಿರಿಯ ಚಿಂತಕ-ಸಾಹಿತಿ. ಇವರಿಗೆಲ್ಲ ಬೇಕಿರೋದು ಕನ್ನಡವಲ್ಲ – ಪರಿಷತ್, ರಾಜ್ಯಸಭೆ, ಜ್ಞಾನಪೀಠ ಎಂದು ರವಿ ಎನ್‌ ಎಂಬುವವರು ಕಿಡಿಕಾರಿದ್ದಾರೆ.

ಯಾವ ವೇದಿಕೆಯ ಮೇಲೆ ಬರಿ ಕನ್ನಡ ಮೆಳೈಸಬೇಕೊ, ಹಿಗ್ಗಿ ಉಬ್ಬಬೇಕೊ, ರಾರಾಜಿಸಬೇಕೊ, ಮೆರೆಯಬೇಕೊ, ಆಗಸದೆತ್ತರಕ್ಕೆ ಜಿಗಿಯಬೇಕೊ, ಜಗತ್ತಿಗೆ ತನ್ನ ಹಿರಿಮೆ ಪಸರಿಸಬೇಕೊ, ತನ್ನ ಒಡಲಿನ ಸಾಹಿತ್ಯ ಕಂದಮ್ಮಗಳ ಬಗ್ಗೆ ಹೆಮ್ಮೆಯಿಂದ ಸಾರಬೇಕೊ, ಗಟ್ಟಿಯಾಗಿ ತನ್ನ ಸಾವಿರಾರು ವರ್ಷಗಳ ವೈಭವ ಹೇಳಬೇಕೊ ಅಂತಹ ವೇದಿಕೆಯ ಅಧ್ಯಕ್ಷರಿಂದ ಹಿಂದಿ ಒಪ್ಪಿ ಎಂಬ ಸಂದೇಶ.. ಎಂದು ರೋಹಿತ್ ಸಿಂಹ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆಯಂತೆ.. ಹೀಗೆ ಹೇಳಿ ಹೇಳಿ ತಾನೇ ಕನ್ನಡಿಗರನ್ನು ಗುಲಾಮಗಿರಿಗೆ ತಳ್ಳಿರೋದು. ಕರ್ನಾಟಕದಲ್ಲಿ ಕನ್ನಡಕ್ಕೆ ಪುರಸ್ಕಾರ ಯಾಕಿಲ್ಲಾ ಅಂತ ಕೇಳೋದು ಬಿಟ್ಟು ಹಿಂದಿಗೆ ಯಾಕೆ ತಿರಸ್ಕಾರ ಅಂತ ಕೇಳ್ತಿದ್ದಾರೆ.. ಹಿಂದಿಗರು ಹಿಂದಿ ಜೊತೆಗೆ ವಿಶ್ವ ಸಂಪರ್ಕ ಭಾಷೆ ಆಂಗ್ಲ ಕಲಿಯಬಹುದು ಆದರೆ ಅದೇ ನಮ್ಮ ಕನ್ನಡಿಗರು ಆಂಗ್ಲ ಕಲಿಯಬಾರದೇ ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಹಿಂದಿ ರಾಷ್ಟ್ರ ಭಾಷೆ ಹೇಗೆ!? ಒಕ್ಕೂಟ ವ್ಯವಸ್ಥೆಯಲ್ಲಿ ಇರುವ ಅನೇಕ ದೇಶ ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಅದೊಂದು ಅಧಿಕೃತ ಭಾಷೆ ಅಷ್ಟೆ. ಈ ಮೂಲಭೂತ ಸತ್ಯದ ಅರಿವು ಕೂಡ ಇರದವರನ್ನು ಕನ್ನಡ ಸಾಹಿತಿ ಎಂದು ಒಪ್ಪಿಕೊಳ್ಳುವುದು ಹೇಗೆ? ಇಂತಹ ಕನ್ನಡ ನುಡಿ ದ್ರೋಹಿಯನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದು ಯಾವ ಕಾರಣಕ್ಕೂ ಸಮಂಜಸವಲ್ಲ. ಬೇಕಾದರೆ ಅಭಾಹಿಂಸಾಸ (ಅಖಿಲ ಭಾರತ ಹಿಂದಿ ಸಾಹಿತ್ಯ ಸಮ್ಮೇಳನ) ಕ್ಕೆ ಅಧ್ಯಕ್ಷರಾಗಲಿ ಎಂದು ದಾದಾ ಖಲಂಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೊಡ್ಡರಂಗೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಕನ್ನಡ ಪ್ರಭ ಪತ್ರಿಕೆಯಲ್ಲಿ ಕವನವೊಂದನ್ನು ಬರೆದಿದ್ದರು. ಹಾಗಾಗಿಯೇ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಇವರು ಅಗ್ರಹಾರದ ಗೇಟ್ ಕೀಪರ್ ಕೆಲಸ ಮಾಡುತ್ತಿದ್ದಾರೆ ಎಂದೆಲ್ಲಾ ಕನ್ನಡಿಗರು ಟೀಕಿಸಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...