Homeಕರ್ನಾಟಕಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

- Advertisement -
- Advertisement -

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ. ಸಾವಿರ ಡಾಲರ್ ನೀಡಿ ಅನ್‍ಲೈನ್‍ನಲ್ಲಿ ಗೌರವ ಡಾಕ್ಟರೇಟ್ ಪಡೆಯುವಂತಹ ಪರಿಸ್ಥಿತಿ ಇದೆ. ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಬೇಕು ಎಂದು ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಸುದ್ಧಿ ಸಂಪಾದಕ ಡಾ.ಮೈ.ಸಿ.ಪಾಟೀಲ್ ತಿಳಿಸಿದರು.
ತುಮಕೂರು ನಗರದ ಕನ್ನಡಭವನದಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪಿಎಚ್‍ಡಿ ಪಡೆದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಗೌಡ (ಗೌರವ ಡಾಕ್ಟರೇಟ್) ಪಡೆಯುವಲ್ಲಿ ಅಕ್ರಮ, ಅನ್ಯಾಯ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ಹೋದರೆ ಅರ್ಜಿದಾರನಿಗೆ ದಂಡ ಹಾಕಲಾಯಿತು. ನ್ಯಾಯಾಧೀಶರೂ ಕೂಡ ಅಕ್ರಮಗಳನ್ನೇ ಸಮರ್ಥಿಸುವಂತಹ ವಾತಾವರಣ ಇರುವುದು ವಿಷಾದನೀಯ. ಹಾಗಾಗಿ ಅಕ್ರಮ ವಿಶ್ವವಿದ್ಯಾಲಯಗಳ ಬಗ್ಗೆ ಎಚ್ಚರಿಕೆ ಇರಬೇಕು. ಗೌರವ ಡಾಕ್ಟರೇಟ್ ವ್ಯಕ್ತಿಯ ಗೌರವ ಹೆಚ್ಚಿಸುವ ಬದಲು ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿವೆ. ಅಂತಹ ವಿವಿಗಳಿಂದ ಡಾಕ್ಟರೇಟ್ ಪಡೆಯಬಾರದು. ಅತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾರ್ಥ ಇನ್‍ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಡಾ.ಎನ್.ಎಸ್.ರವಿಕುಮಾರ್, ಬೇರೆಯವರು ಬರೆದದ್ದನ್ನೇ ಯಥಾವತ್ತಾಗಿ ಹಾಕಿಕೊಂಡು ಪಿಎಚ್‌ಡಿ ಮಾಡುವುದು ಬೇಡ. ಅದು ಕನ್ನಡಕ್ಕೆ ಎಸಗಿದ ದ್ರೋಹವಾಗುತ್ತದೆ. ನಕಲು ಮಾಡಿದರೆ ಮೋಸ ಮಾಡಿದಂತೆ ಆಗುತ್ತದೆ. ಬೇಕಾದರೆ ಬೇರೆಯವರು ಏನು ಬರೆದು ನಿಲ್ಲಿಸಿದ್ದಾರೋ ಅಲ್ಲಿಂದ ಬೇಕಾದರೆ ಮುಂದುವರಿಸಿ ಪಿಎಚ್‌ಡಿ ಬರೆಯಿರಿ. ಅದು ಬಿಟ್ಟು ನಕಲು ಒಳ್ಳೆಯ ಲಕ್ಷಣವಲ್ಲ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪ್ರಾಸ್ತಾವಿಕ ಮಾತನಾಡಿ, ಕನ್ನಡದ ಅಸ್ಮಿತೆ ಕಳೆದುಹೋಗುತ್ತಿರುವ ಸಂದರ್ಭ ಇದು. ಕನ್ನಡ ಅಂದರೆ ಭಾಷೆ, ನಾಡು, ಬದುಕು, ಜೀವನ ಕ್ರಮ, ಆಹಾರ ಪದ್ದತಿ ಎಲ್ಲವೂ ಆಗಿದೆ. ಒಂದು ಭಾಷೆ ಹೋದರೆ ಇದೆಲ್ಲವೂ ನಾಶವಾಗುತ್ತದೆ. ಬಹುಸಂಸ್ಕೃತಿಯ ಒಂದು ಕೊಂಡಿಹೋದರೂ ಆ ಜನಾಂಗದ ಇರುವಿಕೆಯೇ ಇಲ್ಲವಾಗುತ್ತದೆ. ಹಾಗಾಗಿ ಕನ್ನಡ ರಕ್ಷಣೆ ಮಾಡಬೇಕು ಎಂದು ಹೇಳಿದರು.

ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಪಿಎಚ್‌ಡಿ ಬರೆಯುವ ಸಂದರ್ಭದಲ್ಲಿ ಇಂತಹ ಪದಗಳು, ಇಂತಹ ವಾಕ್ಯ, ಇಂತಹ ವಸ್ತು ಇರಬಾರದು ಎಂಬ ನಿಯಮಗಳು ಬರಬಹುದು. ಇದನ್ನು ಮನಗಂಡು ಪಿಎಚ್‌ಡಿ ಪಡೆದಿರುವವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸೂಕ್ಷ್ಮ ಸನ್ನಿವೇಶದಲ್ಲಿ ಸಾಹಿತ್ಯದ ಉಳಿವಿಗೆ ಸಾಹಿತ್ಯ ಪರಿಷತ್ ಇರುತ್ತದೆ. ತಾವು ಕೂಡ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಒಳ್ಳೆಯದಾಗುತ್ತದೆ. ಬುದ್ದ ಬಸವ, ಅಂಬೇಡ್ಕರ್, ಕುವೆಂಪು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...