Homeಕರ್ನಾಟಕಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ: ಡಾ.ಮೈ.ಸಿ.ಪಾಟೀಲ್

- Advertisement -
- Advertisement -

ಗೌರವ ಡಾಕ್ಟರೇಟ್ ಪಡೆಯುವಲ್ಲಿ ವ್ಯಾಪಕ ಹಗರಣಗಳು ನಡೆಯುತ್ತಿವೆ. ಸಾವಿರ ಡಾಲರ್ ನೀಡಿ ಅನ್‍ಲೈನ್‍ನಲ್ಲಿ ಗೌರವ ಡಾಕ್ಟರೇಟ್ ಪಡೆಯುವಂತಹ ಪರಿಸ್ಥಿತಿ ಇದೆ. ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಬೇಕು ಎಂದು ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಸುದ್ಧಿ ಸಂಪಾದಕ ಡಾ.ಮೈ.ಸಿ.ಪಾಟೀಲ್ ತಿಳಿಸಿದರು.
ತುಮಕೂರು ನಗರದ ಕನ್ನಡಭವನದಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪಿಎಚ್‍ಡಿ ಪಡೆದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಗೌಡ (ಗೌರವ ಡಾಕ್ಟರೇಟ್) ಪಡೆಯುವಲ್ಲಿ ಅಕ್ರಮ, ಅನ್ಯಾಯ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ಹೋದರೆ ಅರ್ಜಿದಾರನಿಗೆ ದಂಡ ಹಾಕಲಾಯಿತು. ನ್ಯಾಯಾಧೀಶರೂ ಕೂಡ ಅಕ್ರಮಗಳನ್ನೇ ಸಮರ್ಥಿಸುವಂತಹ ವಾತಾವರಣ ಇರುವುದು ವಿಷಾದನೀಯ. ಹಾಗಾಗಿ ಅಕ್ರಮ ವಿಶ್ವವಿದ್ಯಾಲಯಗಳ ಬಗ್ಗೆ ಎಚ್ಚರಿಕೆ ಇರಬೇಕು. ಗೌರವ ಡಾಕ್ಟರೇಟ್ ವ್ಯಕ್ತಿಯ ಗೌರವ ಹೆಚ್ಚಿಸುವ ಬದಲು ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿವೆ. ಅಂತಹ ವಿವಿಗಳಿಂದ ಡಾಕ್ಟರೇಟ್ ಪಡೆಯಬಾರದು. ಅತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದಾರ್ಥ ಇನ್‍ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಡಾ.ಎನ್.ಎಸ್.ರವಿಕುಮಾರ್, ಬೇರೆಯವರು ಬರೆದದ್ದನ್ನೇ ಯಥಾವತ್ತಾಗಿ ಹಾಕಿಕೊಂಡು ಪಿಎಚ್‌ಡಿ ಮಾಡುವುದು ಬೇಡ. ಅದು ಕನ್ನಡಕ್ಕೆ ಎಸಗಿದ ದ್ರೋಹವಾಗುತ್ತದೆ. ನಕಲು ಮಾಡಿದರೆ ಮೋಸ ಮಾಡಿದಂತೆ ಆಗುತ್ತದೆ. ಬೇಕಾದರೆ ಬೇರೆಯವರು ಏನು ಬರೆದು ನಿಲ್ಲಿಸಿದ್ದಾರೋ ಅಲ್ಲಿಂದ ಬೇಕಾದರೆ ಮುಂದುವರಿಸಿ ಪಿಎಚ್‌ಡಿ ಬರೆಯಿರಿ. ಅದು ಬಿಟ್ಟು ನಕಲು ಒಳ್ಳೆಯ ಲಕ್ಷಣವಲ್ಲ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಪ್ರಾಸ್ತಾವಿಕ ಮಾತನಾಡಿ, ಕನ್ನಡದ ಅಸ್ಮಿತೆ ಕಳೆದುಹೋಗುತ್ತಿರುವ ಸಂದರ್ಭ ಇದು. ಕನ್ನಡ ಅಂದರೆ ಭಾಷೆ, ನಾಡು, ಬದುಕು, ಜೀವನ ಕ್ರಮ, ಆಹಾರ ಪದ್ದತಿ ಎಲ್ಲವೂ ಆಗಿದೆ. ಒಂದು ಭಾಷೆ ಹೋದರೆ ಇದೆಲ್ಲವೂ ನಾಶವಾಗುತ್ತದೆ. ಬಹುಸಂಸ್ಕೃತಿಯ ಒಂದು ಕೊಂಡಿಹೋದರೂ ಆ ಜನಾಂಗದ ಇರುವಿಕೆಯೇ ಇಲ್ಲವಾಗುತ್ತದೆ. ಹಾಗಾಗಿ ಕನ್ನಡ ರಕ್ಷಣೆ ಮಾಡಬೇಕು ಎಂದು ಹೇಳಿದರು.

ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಪಿಎಚ್‌ಡಿ ಬರೆಯುವ ಸಂದರ್ಭದಲ್ಲಿ ಇಂತಹ ಪದಗಳು, ಇಂತಹ ವಾಕ್ಯ, ಇಂತಹ ವಸ್ತು ಇರಬಾರದು ಎಂಬ ನಿಯಮಗಳು ಬರಬಹುದು. ಇದನ್ನು ಮನಗಂಡು ಪಿಎಚ್‌ಡಿ ಪಡೆದಿರುವವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸೂಕ್ಷ್ಮ ಸನ್ನಿವೇಶದಲ್ಲಿ ಸಾಹಿತ್ಯದ ಉಳಿವಿಗೆ ಸಾಹಿತ್ಯ ಪರಿಷತ್ ಇರುತ್ತದೆ. ತಾವು ಕೂಡ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದರೆ ಒಳ್ಳೆಯದಾಗುತ್ತದೆ. ಬುದ್ದ ಬಸವ, ಅಂಬೇಡ್ಕರ್, ಕುವೆಂಪು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...