Homeಚಳವಳಿಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ರೈತರ ರ್‍ಯಾಲಿಗೆ ಕೇಂದ್ರ ಸರ್ಕಾರ ವಿರುದ್ದವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿ ರ್‍ಯಾಲಿಯು ’ರಾಷ್ಟ್ರಕ್ಕೆ ಮುಜುಗರ’ ಮಾಡುತ್ತದೆ ಎಂದು ಹೇಳಿ, ರ್‍ಯಾಲಿಯನ್ನು ತಡೆಯುವಂತೆ ಮನವಿ ಸಲ್ಲಿಸಿತ್ತು.

- Advertisement -
- Advertisement -

ಶನಿವಾರ ನಾಸಿಕ್‌ನಿಂದ ಹೊರಟ ಮಹಾರಾಷ್ಟ್ರದ 21 ಜಿಲ್ಲೆಗಳ ಲಕ್ಷಾಂತರ ರೈತರ ರ್‍ಯಾಲಿಯು, 180 ಕಿ.ಮೀ. ದೂರದ ಮಹಾರಾಷ್ಟ್ರ ರಾಜಧಾನಿಯಾದ ಮುಂಬೈಗೆ ತಲುಪುತ್ತಿದೆ. ಸೋಮವಾರದಂದು ರೈತರು ನಗರದ ಹೆಸರಾಂತ ಆಜಾದ್‌ ಮೈದಾನದಲ್ಲಿ ಸೇರಲಿದ್ದಾರೆ. ಘೋಷಣೆ ಕೂಗುತ್ತಾ ಹೊರಟ ರೈತರ ರ್‍ಯಾಲಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ವೈರಲಾಗಿದೆ.

ರೈತರ ಈ ರ್‍ಯಾಲಿಯಲ್ಲಿ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಮಿತ್ರಪಕ್ಷವಾಗಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಅಖಿಲ ಭಾರತ ಕಿಸಾನ್ ಸಭಾದ ಅಡಿಯಲ್ಲಿ ಒಟ್ಟುಗೂಡಿಡಿರುವ ರೈತರು ಕೆಲವೇ ಗಂಟೆಗಳಲ್ಲಿ ಮುಂಬೈ ತಲುಪುವ ನಿರೀಕ್ಷೆಯಿದೆ. ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲಿದ್ದು ಅದಕ್ಕೂ ಎರಡು ದಿನಗಳ ಮೊದಲೇ ರೈತರು ಇಲ್ಲಿ ರ್‍ಯಾಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ: 69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಸಹ ಟ್ರ್ಯಾಕ್ಟರ್‌ ಪರೇಡ್‌ ನಡೆದಿತ್ತು!

ಜನವರಿ 26 ರಂದು ದೆಹಲಿಯ ಸುತ್ತಲೂ ಇರುವ ರಿಂಗ್ ರಸ್ತೆಯ ಉದ್ದಕ್ಕೂ ನಡೆಯಲಿರುವ ರ್‍ಯಾಲಿಯಲ್ಲಿ ಲಕ್ಷಾಂತರ ಟ್ರಾಕ್ಟರುಗಳು ಭಾಗವಹಿಸುವ ನಿರೀಕ್ಷೆಯಿದೆ ಮತ್ತು ಇದಕ್ಕಾಗಿ ದೆಹಲಿ ಪೊಲೀಸರಿಂದ ಅನುಮತಿ ಕೋರಲಾಗಿದೆ.

ಉದ್ದೇಶಿತ ರ್‍ಯಾಲಿಗೆ ತಾವು ಪೊಲೀಸ್‌‌‌ ಅನುಮತಿ ಪಡೆದಿದ್ದೇವೆ ಎಂದು ಶನಿವಾರ ರೈತರು ಹೇಳಿಕೊಂಡಿದ್ದರು. ಆದರೆ ಇದನ್ನು ದೆಹಲಿ ಪೊಲೀಸರು ವಿರೋಧಿಸಿದ್ದು, “ರೈತರು ನಮಗೆ ರ್‍ಯಾಲಿ ನಡೆಯುವ ಮಾರ್ಗದ ಬಗ್ಗೆ ಲಿಖಿತವಾಗಿ ತಿಳಿಸಿಲ್ಲ. ಅದನ್ನು ಲಿಖಿತವಾಗಿ ಸ್ವೀಕರಿಸಿದ ನಂತರ ಈ ಬಗ್ಗೆ ತಿಳಿಸುತ್ತೇವೆ” ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ರ್‍ಯಾಲಿಯ ಬಗ್ಗೆ ದೆಹಲಿ ಪೊಲೀಸರು ಇಂದು ಸಂಜೆ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ 11 ವಿಫಲ ಮಾತುಕತೆಗಳನ್ನು ನಡೆಸಿದೆ. ರ್‍ಯಾಲಿಗೆ ಕೇಂದ್ರ ಸರ್ಕಾರ ವಿರುದ್ದವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿ ರ್‍ಯಾಲಿಯು “ರಾಷ್ಟ್ರಕ್ಕೆ ಮುಜುಗರ” ಉಂಟು ಮಾಡುತ್ತದೆ ಎಂದು ಹೇಳಿ, ರ್‍ಯಾಲಿಯನ್ನು ತಡೆಯುವಂತೆ ಮನವಿ ಸಲ್ಲಿಸಿತ್ತು. ಆದರೆ ಸುಪ್ರೀಂಕೋರ್ಟ್ ಕೇಂದ್ರದ ಮನವಿಯನ್ನು ತಿರಸ್ಕರಿಸಿದ್ದು, ಆಸ್ತಿಪಾಸ್ತಿ ಹಾಗೂ ಜೀವಗಳಿಗೆ ಹಾನಿಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸುವ ರೈತರ ಹಕ್ಕನ್ನು ನ್ಯಾಯಾಲಯ ಎತ್ತಿಹಿಡಿದಿತ್ತು.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...