Homeಕರ್ನಾಟಕಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

ಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

- Advertisement -
- Advertisement -

ಮೈಸೂರಿನಲ್ಲಿ ನಿನ್ನೆ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶಕ್ಕೆ ಸಾಕ್ಷಾತ್ ಪ್ರಧಾನ ಮಂತ್ರಿಗಳೇ ಬಂದಿದ್ದರು. ಪ್ರಧಾನಿಗಳು ತಮ್ಮ ಭಾಷಣದಲ್ಲಿ ಎಂದಿನಂತೆಯೇ ದೇಶದ ಜನಸಾಮನ್ಯರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಹೋಗಲಿಲ್ಲ. ಬದಲಿಗೆ ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು. ಆಶ್ಚರ್ಯಕರವೆಂಬಂತೆ ದೇವೆಗೌಡರು ಮತ್ತು ಕುಮಾರಸ್ವಾಮಿಯವರ ಮೇಲೆ ಹೆಚ್ಚಿನ ದಾಳಿ ನಡೆಸಲು ಹೋಗಲಿಲ್ಲ. ಬದಲಿಗೆ ಅವರು ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಬಾಧಿತರಾಗಿದ್ದೆಂಬ ಮಾತುಗಳನ್ನು ಆಡಿದರು. ರಾಹುಲ್ ಗಾಂಧಿ ದೇವೇಗೌಡರಿಗೆ ಹೆದರಿಕೊಂಡು ಕರ್ನಾಟಕದಲ್ಲಿ ಸ್ಪರ್ಧಿಸುತ್ತಿಲ್ಲವೆಂದೂ ಹೇಳಿದರು.

ಆದರೆ ಎಲ್ಲಕ್ಕಿಂತ ಆಶ್ಚರ್ಯಕರ ಸಂಗತಿ ಏನೆಂದರೆ ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಅಭ್ಯರ್ಥಿಗಳ ಕುರಿತಾಗಿ ಮತ್ತು ಅಲ್ಲಿನ ಚುನಾವಣೆಯ ಬಗ್ಗೆ ಬಿಜೆಪಿಯ ಕುರಿತು ಅವರು ಮಾತನಾಡಿದರು. ಆದರೆ ಭಾಷಣ ಮುಗಿಯುತ್ತಾ ಬಂದಂತೆ ಅವರು ಅಂಬರೀಶ್‍ರವರನ್ನು ನೆನೆಸಿಕೊಂಡು ಅವರ ಪತ್ನಿ ಸುಮಲತಾ ಪರ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು. ಆದರೆ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರ ಕುರಿತು ಪ್ರಸ್ತಾಪ ಮಾಡಲೇ ಇಲ್ಲ. ಇದು ಹಲವರ ಹುಬ್ಬೇರಿಸಿದೆ

ಏಕೆಂದರೆ ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಬಂದಾಗ ಸ್ಥಳೀಯ ಅಭ್ಯರ್ಥಿಗಳನ್ನು ಮುಂದೆ ನಿಂತು ಪರಿಚಯಿಸಿ ಅವರ ಪರ ಮತ ಹಾಕಿ ಎಂದು ಅವರ ಬಾಯಲ್ಲಿ ಹೇಳಿಸುವುದು ಸಾಮಾನ್ಯ. ಆದರೆ ಇಲ್ಲಿ ವೇದಿಕೆಯ ಮೇಲೆ ಇದ್ದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತು ವೇದಿಕೆಯ ಮೇಲೆ ಇಲ್ಲದ ಸುಮಲತಾ ಅವರ ಪಕ್ಷದ ಅಭ್ಯರ್ಥಿಯು ಅಲ್ಲದೇ ಬಿಜೆಪಿ ಬೆಂಬಲಿಸಿರುವ ಸುಮಲತಾರವರ ಪರ ಮೋದಿ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದ ಚುಣಾವಣೆಯ ಕುರಿತು ಬಿಜೆಪಿ ಎಷ್ಟರ ಮಟ್ಟಿಗೆ ತಲೆಕೆಡಿಸಿಕೊಂಡಿದೆ ಎಂಬುದಕ್ಕೆ ಇದು ಕೂಡ ಸಾಕ್ಷಿ. ಮೋದಿಯವರಿಗೆ ಬಹುಶಃ ವೇದಿಕೆಯ ಮೇಲೆ ಮಾತನಾಡುತ್ತಿರುವಾಗ ತಮಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳಿಗಿಂತ ಸುಮಲತಾರನ್ನೇ ಗೆಲ್ಲಿಸುವ ಕುರಿತು ಹೆಚ್ಚು ಕಾಳಜಿಯಿರುವಂತೆ ಕಾಣಿಸುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಮಂಡ್ಯ ಕ್ಷೇತ್ರದ ರಾಜಕೀಯದ ಕುರಿತು ಬಿಜೆಪಿ ನಿಲುವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...