Homeಮುಖಪುಟಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು, ಈ ನಡುವೆ ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ.

- Advertisement -
- Advertisement -

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದಲ್ಲಿ ‘ಒಂದು ದಿನದಲ್ಲಿ’ ಪರಿಸ್ಥಿತಿಯನ್ನು ಪರಿಹರಿಸಬಹುದು ಎಂದು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಾಜಿ ಸಚಿವೆ, 78 ವರ್ಷದ ಚಾವ್ಲಾ ಅವರು ದಿ ಸಂಡೇ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, “ಭಾರತದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಬಿಜೆಪಿ ನಾಯಕಿಯಾಗಿ ಅಲ್ಲ. ಯಾವುದೇ ಪ್ರತಿಭಟನೆ ಇಷ್ಟು ದಿನ ನಡೆಯಬಾರದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಪರಿಹಾರವನ್ನು ಬೇಗನೆ ಕಂಡುಹಿಡಿಯಬೇಕು. ಡಿಸೆಂಬರ್ ಮಧ್ಯದಲ್ಲಿ, ಶೀತ ಅಥವಾ ಆತ್ಮಹತ್ಯೆಯಿಯ ಕಾರಣಕ್ಕೆ ಸಾಯುತ್ತಿರುವ ರೈತರ ಸಂಖ್ಯೆ 30 ಕ್ಕೆ ತಲುಪಿದ ನಂತರ, ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ. ಕೃಷಿ ಸಚಿವರಿಗೆ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಪ್ರಧಾನಿ ಈ ವಿಷಯವನ್ನು ಕೈಗೆತ್ತಿಕೊಂಡು ಪರಿಹರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಸ್ವತಃ ರೈತರೊಂದಿಗೆ ಕುಳಿತು ಪರಿಹಾರ ಕಂಡುಕೊಳ್ಳಬೇಕು. ಪ್ರಧಾನಮಂತ್ರಿ ಬಯಸಿದರೆ, ಒಂದು ದಿನದಲ್ಲಿ ಪರಿಹಾರವನ್ನು ಕಂಡುಹಿಡಿಯಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಲಕ್ಷ್ಮೀ ಕಾಂತಾ ಚಾವ್ಲಾ ಹೇಳಿದ್ದಾರೆ.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ, (ನವೆಂಬರ್ 13 ರಂದು) ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹತ್ತು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ’ ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಕುರಿತ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಅಕ್ಟೋಬರ್ 15 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ರಾಜ್ಯ ಕಾರ್ಯದರ್ಶಿ ಮಂಜಿಂದರ್ ಸಿಂಗ್, ರಾಜ್ಯದ ಹಿರಿಯ ನಾಯಕತ್ವ ಎಂದಿಗೂ ಆಂದೋಲನವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳುತ್ತಾರೆ.

‘ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ. ಹಿಂದೆ ಹಲವು ಸಲ ಈ ಕಾಯ್ದೆಗಳ ಅಪಾಯದ ಕುರಿತು ನಮ್ಮ ಕೇಂದ್ರ ನಾಯಕರೊಂದಿಗೆ ಗಂಭೀರವಾಗಿ ಚರ್ಚಿಸಿದ್ದೇನೆ. ಆದರೆ ಕೇಂದ್ರ ನಾಯಕತ್ವಕ್ಕೆ ಹಠವೇ ಮುಖ್ಯವಾದ ಕಾರಣಕ್ಕೆ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ ” ಎಂದು ಮಂಜಿಂದರ್ ಸಿಂಗ್ ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ.

ರಾಜ್ಯದ 31 ಬಿಜೆಪಿ ನಾಯಕರ ಮನೆಗಳ ಹೊರಗೆ ರೈತರ ಅನಿರ್ದಿಷ್ಟ ಆಂದೋಲನಗಳು ಮುಂದುವರಿದಿವೆ. ಸಾರ್ವಜನಿಕ ಸಮಾರಂಭಕ್ಕಾಗಿ ಬಿಜೆಪಿ ನಾಯಕರು ಮನೆಗಳಿಂದ ಹೊರಬಂದಾಗಲೆಲ್ಲಾ ರೈತರ ಪ್ರತಿರೋಧವನ್ನು ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಬತಿಂಡಾ ಹೋಟೆಲ್ ಹೊರಗೆ ಶನಿವಾರ ಧರಣಿ ನಡೆಸಿದರು, ಅಲ್ಲಿ ಮಾಜಿ ಸಚಿವ, ಬಿಜೆಪಿಯ ಮನೋರಂಜನ್ ಕಲಿಯಾ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಿಜೆಪಿ ನಾಯಕರು ತಮ್ಮೊಂದಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್ಸಿಮರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...