Homeಮುಖಪುಟಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು, ಈ ನಡುವೆ ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ.

- Advertisement -
- Advertisement -

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದಲ್ಲಿ ‘ಒಂದು ದಿನದಲ್ಲಿ’ ಪರಿಸ್ಥಿತಿಯನ್ನು ಪರಿಹರಿಸಬಹುದು ಎಂದು ಶನಿವಾರ ಹೇಳಿದ್ದಾರೆ.

ಮುಂದಿನ ತಿಂಗಳು ಪಂಜಾಬಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿದ್ದು ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಾಜಿ ಸಚಿವೆ, 78 ವರ್ಷದ ಚಾವ್ಲಾ ಅವರು ದಿ ಸಂಡೇ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, “ಭಾರತದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಬಿಜೆಪಿ ನಾಯಕಿಯಾಗಿ ಅಲ್ಲ. ಯಾವುದೇ ಪ್ರತಿಭಟನೆ ಇಷ್ಟು ದಿನ ನಡೆಯಬಾರದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಪರಿಹಾರವನ್ನು ಬೇಗನೆ ಕಂಡುಹಿಡಿಯಬೇಕು. ಡಿಸೆಂಬರ್ ಮಧ್ಯದಲ್ಲಿ, ಶೀತ ಅಥವಾ ಆತ್ಮಹತ್ಯೆಯಿಯ ಕಾರಣಕ್ಕೆ ಸಾಯುತ್ತಿರುವ ರೈತರ ಸಂಖ್ಯೆ 30 ಕ್ಕೆ ತಲುಪಿದ ನಂತರ, ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ. ಕೃಷಿ ಸಚಿವರಿಗೆ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿದ್ದರೆ, ಪ್ರಧಾನಿ ಈ ವಿಷಯವನ್ನು ಕೈಗೆತ್ತಿಕೊಂಡು ಪರಿಹರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪ್ರಧಾನಿ ಸ್ವತಃ ರೈತರೊಂದಿಗೆ ಕುಳಿತು ಪರಿಹಾರ ಕಂಡುಕೊಳ್ಳಬೇಕು. ಪ್ರಧಾನಮಂತ್ರಿ ಬಯಸಿದರೆ, ಒಂದು ದಿನದಲ್ಲಿ ಪರಿಹಾರವನ್ನು ಕಂಡುಹಿಡಿಯಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಲಕ್ಷ್ಮೀ ಕಾಂತಾ ಚಾವ್ಲಾ ಹೇಳಿದ್ದಾರೆ.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ, (ನವೆಂಬರ್ 13 ರಂದು) ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹತ್ತು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ’ ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ಕುರಿತ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಅಕ್ಟೋಬರ್ 15 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ರಾಜ್ಯ ಕಾರ್ಯದರ್ಶಿ ಮಂಜಿಂದರ್ ಸಿಂಗ್, ರಾಜ್ಯದ ಹಿರಿಯ ನಾಯಕತ್ವ ಎಂದಿಗೂ ಆಂದೋಲನವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳುತ್ತಾರೆ.

‘ಕಳೆದ 10 ದಿನಗಳಲ್ಲಿ 15 ಕ್ಕೂ ಹೆಚ್ಚು ಬಿಜೆಪಿ ನಾಯಕರು ಪಕ್ಷ ತೊರೆದು ಅಕಾಲಿ ದಳ ಸೇರಿದ್ದಾರೆ. ಹಿಂದೆ ಹಲವು ಸಲ ಈ ಕಾಯ್ದೆಗಳ ಅಪಾಯದ ಕುರಿತು ನಮ್ಮ ಕೇಂದ್ರ ನಾಯಕರೊಂದಿಗೆ ಗಂಭೀರವಾಗಿ ಚರ್ಚಿಸಿದ್ದೇನೆ. ಆದರೆ ಕೇಂದ್ರ ನಾಯಕತ್ವಕ್ಕೆ ಹಠವೇ ಮುಖ್ಯವಾದ ಕಾರಣಕ್ಕೆ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ ” ಎಂದು ಮಂಜಿಂದರ್ ಸಿಂಗ್ ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ.

ರಾಜ್ಯದ 31 ಬಿಜೆಪಿ ನಾಯಕರ ಮನೆಗಳ ಹೊರಗೆ ರೈತರ ಅನಿರ್ದಿಷ್ಟ ಆಂದೋಲನಗಳು ಮುಂದುವರಿದಿವೆ. ಸಾರ್ವಜನಿಕ ಸಮಾರಂಭಕ್ಕಾಗಿ ಬಿಜೆಪಿ ನಾಯಕರು ಮನೆಗಳಿಂದ ಹೊರಬಂದಾಗಲೆಲ್ಲಾ ರೈತರ ಪ್ರತಿರೋಧವನ್ನು ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಬತಿಂಡಾ ಹೋಟೆಲ್ ಹೊರಗೆ ಶನಿವಾರ ಧರಣಿ ನಡೆಸಿದರು, ಅಲ್ಲಿ ಮಾಜಿ ಸಚಿವ, ಬಿಜೆಪಿಯ ಮನೋರಂಜನ್ ಕಲಿಯಾ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ಇದೇ ವೇಳೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಬಿಜೆಪಿ ನಾಯಕರು ತಮ್ಮೊಂದಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್ಸಿಮರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...