Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...