Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...