Homeಅಂಕಣಗಳುಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

ಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

- Advertisement -
 ಯಾಹೂ |
ನೇರ ನಡೆ ನುಡಿಗೆ ಹೆಸರಾಗಿದ್ದ ಜಿ. ಮಾದೇಗೌಡರು, ಜೆಡಿಎಸ್ ಕಡೆಯಿಂದ ಹಣ ಬರುತ್ತದೆಂದು ಮಂಡ್ಯದ ಗಾಂಧಿಭವನದ ಎದುರು ಕುಳಿತು ಕಾದು ಸಾಕಾಗಿ, ಕಡೆಗೆ ಪುಟ್ಟರಾಜನಿಗೆ ಫೋನು ಮಾಡಿ ‘ಎಲ್ಲೊದುಡ್ಡು’ ಎಂದರಂತಲ್ಲಾ, ಪುಟ್ಟರಾಜನಿಗೆ ಮಾದೇಗೌಡರಿಂದ ಸಾಲ ಪಡೆದು ಬಡ್ಡಿಯನ್ನು ಕೊಡದೆ ಕುಂತವನ ದನಿಯಲ್ಲಿ, “ಅಪ್ಪಾಜಿಆರೇಂಜ್ ಮಾಡ್ತಿನಿ” ಎಂದುಗೋಗರೆದಂತರಲ್ಲಾ.ಮಾದೇಗೌಡರು, ಮಂಡ್ಯದ ಸೊಗಡಿಗೆ ಹೆಸರಾದವರು, ಗಾಂಧಿಮಾರ್ಗಿ ಬೇರೆ, ಅದಕ್ಕಾಗಿ ಗಾಂಧಿ ಭವನ ನಿರ್ಮಿಸಿ ಇಳಿ ಹೊತ್ತಿನಲ್ಲಿ ಅದರ ಮುಂದೆ ಕುಳಿತು ಈ ನಾಡಿನ ಬಗ್ಗೆ ಚಿಂತಿಸದವರು. ಆದರೆ ಸ್ವಂತದ ಬಗ್ಗೆ ತುಂಬಾ ಯೋಚಿಸಿ ದವರು. ಈ ಹಿಂದೆ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ದೂರಿ ಕಾಂಗ್ರೆಸ್ ತೊರೆದು ಬಿ.ಜೆ.ಪಿ ಅವರಿಗೆ ಒಗ್ಗಲಿಲ್ಲ. ಮತ್ತೆ ಕಾಂಗ್ರೆಸ್‍ಗೆ ಮರಳಿ ಮಗನ ಕೈಲಿ ಹಣ ಕಳಿದು. ಇಲ್ಲ ಯಾರು ಕೊಡ್ತಾರೊ ಅವುರೆಸರೇಳು ನಾವೇ ವಸೂಲು ಮಾಡ್ತಿವಿ” ಎಂದಿರೋದು .ವಯಸ್ಸಾದಂತೆ ತಲೆಯೊಳಗಿನ ಸಿದ್ಧಾಂತಗಳು ಸಾಯುತ್ತ, ಕುಟುಂಬದ ವ್ಯಾಮೋಹ ಅಮರಿಕೊಳ್ಳುವುದು, ಈ ಮಾದೇಗೌಡನನ್ನ ಬಿಡಲಿಲ್ಲವಲ್ಲಾ. ಅದೇನಾದರಾಗಲಿ. ಕಡೇಗಳಿಗೆಯಲ್ಲಿ ಚಿಲ್ಲರೆ ಕಾಸಿಗೆ ಪುಟ್ಟರಾಜನನ್ನ ಕೇಳಿ ಮಾದೇಗೌಡನ ಮಾನ ಮೂರು ಕಾಸಿಗೆ ಹರಾಜಾಯ್ತಲ್ಲಾ ಥೂತ್ತೆರಿ.
ಮಂಡ್ಯ ಚುನಾವಣೆಯ ರಂಗು ತಾರಕಕ್ಕೇರಿರುವುದರ ದ್ಯೋತಕವಾಗಿ, ಎನ್.ಡಿ.ಟಿ.ವಿ.ಯ ಮಾಯಾ ಶರ್ಮಾ ಸುಮಲತಾರ ಹಿಂದೆತಿರುಗುತ್ತಿರುವುದು ಗೊತ್ತಾಗಿ, ಮಾಯಾಗೆ ಫೋನ್ ಮಾಡಿದರೆ ಅವರು ಫೋನ್ ತೆಗೆಯಲಿಲ್ಲ. ಎನ್.ಡಿ ಟಿವಿ ಮಾಯಾ ಇವರಿಗಿಂತಲೂ ನಮ್ಮ ವಾಟಿಸ್ಸೆ ಸರಿಯಾಗಿ ಸುದ್ದಿ ನೀಡಲು ಸೂಕ್ತ ವ್ಯಕ್ತಿಯೆಂದು ಫೋನ್ ಮಾಡಲಾಗಿರಿಂಗಾಯ್ತು, ರಿಂಗ್‍ಟೂನ್ “ಬಲೆ ಚಾನ್ಸಿದೆ, ಲಕ್ಕಿ ಚಾನ್ಸಿದೆ, ಬಲೆ ಚಾನ್ಸಿದು’ ‘ಗುಡ್‍ಯುವುನಿಂಗ್ ಸಾರ್’
“ಎಲ್ಲಿದ್ದಿ ವಾಟಿಸ್ಸೆ”
“ಬಿಂಡಿಗನವಿಲೆ ಹೆಸರು ಕೇಳಿದ್ದಿರ ಸಾರ್.”
“ಗೊತ್ತು ಗರುಡಾಚಾರ್ರೂರು”
“ಅಷ್ಟೆ ಅಲ್ಲ ಸಾರ್. ಅಣು ವಿಜ್ಞಾನಿ, ರಾಜಾರಾಮಣ್ಣನ ಊರು. ಸಿನಿಮಾ ಡೈರೆಕ್ಟರು, ಬಿ.ಎಸ್.ರಂಗನ್‍ಊರಿದು”
“ಹೌದಾ”
“ಇಂತ ಪ್ರತಿಭಾವಂತ್ರೆ ಒಂದು ಡಜನ್ ಇರೊ ಊರಿದು”
“ಅಷ್ಟೊಂದು ಪ್ರತಿಭಾವಂತ್ರಿದ್ದರ”
“ನಾವಲ್ಲ ಸಾ ಅವುರ್ಯಲ್ಲ ಅಯ್ಯಂಗಾರ್ರು”
“ಸರಿ ಬುಡು”
“ಈ ಊರಿಗೆ ನಿಖಿಲ್ ಬತ್ತನೆಅಂತ ಭಾರಿಜನ ಸೇರ್ಯವುರೆ”
“ಅಷ್ಟೊಂದು ಜನ ಬಂದವುರಾ”
“ಪರೆಡ್‍ಗೆ ತವುಜೆಂಡಿಂದ ತ್ರೀ ಅಂಡ್ರೆಡ್‍ವರಿಗೂ ಬಟಾವಡೆ ಆಗ್ಯದೆ ಸಾ”
“ಇನ್ನ ಓಟಿಗೆಷ್ಟು ಕೊಡ್ತಾರಪ್ಪ”
“ಅದ ಹೇಳಕ್ಕೆ ಬರದಿಲ್ಲ ಸಾರ್. ಪ್ರತಿಎಮ್ಮೆಲ್ಲೆಗೂ 25 ಕೋಟಿ ಟಾರ್ಗೆಟ್ ಕೊಟ್ಟವುನಂತೆ ಕುಮಾರಣ್ಣ”
“ಅಂದ್ರೆ ಅವುರು ಕೈಯಿಂದ ಖರ್ಚು ಮಾಡಬೇಕಾ”
“ಪುಟ್ಟರಾಜ ತಮ್ಮಣ್ಣ ನಾವೇ ಹಾಯ್ಕಂಡು ಖರ್ಚು ಮಾಡ್ತಿವಿ ಅಂದಿದ್ದರಂತೆ”
“ಅನ್ನಲೇಬೇಕು ಬುಡು. ಇದೇ ತಮ್ಮಣ್ಣನ ಆಸ್ತಿ ವಿಷಯದಲ್ಲಿ ಮಾದೇಗೌಡ್ರು ಹಿಂದೆನೆ ಹೋರಾಡಿದ್ರು”
“ಮಾದೇಗೌಡ ಬುಡಿ ಸಾ. ಅವುನು ಮಾತಾಡಿದ್ರೆ ಅಂಬರೀಶು “ಲೇ ಮುದುಕ ಸುಮ್ಮನಿರು ಇಲ್ಲ ಅಂದ್ರೆ ನಿನ್ನ  ಕತ್ತಿಸಗತಿನಿ ಅಂತಿದ್ನಂತೆ”
“ತಮಾಸಿಗೆ ಅಂಗಂತಿದ್ರು”
“ತಮಾಸಿನೆ ಆದ್ರು ಈ ಮುದುಕ ಹಾಳಾದನಲ್ಲ ಸಾ”
“ಏನು ಹಾಳಾಗಿಲ್ಲ. ಚುನಾವಣೆ ಕರ್ಚಿಗೆ ದುಡ್ಡು ಕೇಳ್ಯವುರೆ ಅಷ್ಟೆ”
“ಮಾದೇಗೌಡ ಪುಟ್ಟರಾಜನ್ನ ಕೇಳಿದಕ್ಕಿಂತ, ಕುಮಾರಣ್ಣನ್ನ ಕೇಳಬೇಕಾಗಿತ್ತು ಸಾ”
“ಕುಮಾರಣ್ಣ ಯಮ್ಮೆಲ್ಲೆಗಳಿಗೆ ವಯಿಸಿಬುಟ್ಟವುನೆ”
“ಮಗನ್ನ ಗೆಲ್ಲಿಸಿಕೊಂಡು ಬರೊ ಜವಾಬ್ದಾರಿಯ ಎಮ್ಮೆಲ್ಲೆಗಳೇ ವಯಿಸಿಕೊಂಡವಂತಲ್ಲ ಸಾ. ಪಾಪ ಆ ಹುಡುಗನಿಗೆ ಬಾಸಣ ಬರವಿಲ್ಲ”
“ವ ಪರವಾಗಿಲ್ಲ ಮಾತಾಡ್ತನೆ”
“ಏನು ಮಾತಾಡ್ತನೆ ಸಾ. ನಾನು ಕುಮಾರಸ್ವಾಮಿ ಹೊಟ್ಟೆಲುಟ್ಟಕ್ಕೆ ಪುಣ್ಯ ಮಾಡಿದ್ದೆಅಂತದೆ.ನಮ್ಮಪ್ಪ ಮಂಡ್ಯಕೆಎಂಟು ಸಾವುರ ಕೋಟಿ ಕೊಟ್ಟವುನೆ ಅಂತದೆ. ನಮ್ಮ ಪಾರ್ಟಿ ಕಾರ್ಯಕರ್ತರಿಗೆ ಯಾರಾದ್ರು ಮೈ ಮುಟ್ಟಿದ್ರೆ ಹುಶಾರು ಅಂದರೆ. ಎಲ್ಲಿತ್ತು ಈ ಕರ್ಮ”
“ಇನ್ನು ಮುಂದೈತೆ ನಿಮಗ್ಯಲ್ಲ”
“ಯಾಕೊ ಅಂಗೆ ಕಾಣ್ತದೆ ಸಾ. ಈ ದ್ಯಾವೇಗೌಡ ಮಕ್ಕಳು ಮರಿನ್ಯಲ್ಲ ರಾಜಕಾರಣಕ್ಕೆ ತರದೇ ಆಗಿದ್ರೆ, ಅವುಕೆ ಒಳ್ಳೆ ಮಾತು, ನಡವಳಿಕೆ, ವಿದ್ಯೆ, ಬುದ್ಧಿ, ಕಲಿಸಿ ಕಳಿಸಬೇಕಾಗಿತ್ತು ಸಾ”
“ದ್ಯಾವೇಗೌಡ್ರೆ ಅಂಗಿದ್ದ ಮೇಲೆ ಅವುಕೆಲ್ಲಿ ಕಲಿಸ್ಯಾರು”
“ಅದು ಸರಿನೆ ಬುಡಿ, ಗೌಡ್ರು ಪಾರ್ಟಿ ಸಿದ್ಧಾಂತಕ್ಕೆ ಒಗ್ಗಿಕಳೊ ಬದ್ಲು ಪಾರ್ಟಿನೆತನಿಗೆ ಬೇಕಾದಂತೆ ಬಗ್ಗಿಸಿಗಂಡ್ರು”
“ಪರವಾಗಿಲ್ಲ ಗೌಡ್ರು ಬಗ್ಗೆ ತಿಳಿಕಂಡಿದ್ದಿ”
“ಯಾವುದಾದ್ರು ಯೂನಿವರ್ಸಿಟಿ ಪರಮಿಷನ್ ಕೊಟ್ರೆ ಡಾಕ್ಟರೇಟ್ ಮಾಡನ ಅಂತ ಇದ್ದಿನಿ ಸಾ”
“ಹಂಪೆ ಯೂನಿವರ್ಸಿಟಿಲಿ ನೊಂದಾಯಿಸಿ ಮಾಡು”
“ಹಂಪೆ ಅಂದೇಟಿಗೆ ಗೆಪ್ತಿಗೆ ಬತ್ತು ಸಾ. ಅಲ್ಲೊಬ್ಬಳು ಮಲ್ಲಿಕಾಗಂಟಿ ಅಂತ ಇದ್ಲು ಈಗ್ಲು ಇದ್ದಳಾ”
“ಇಲ್ಲ ಹೋದ್ಲು. ವಿಶಭಟ್ಟಗೊತ್ತ ನಿಂಗೆ”
“ಗೊತ್ತು ಸಾ. ಇಲ್ಲೆ ನಮ್ಮ ನಾಗ್ತಳ್ಳಿ ಚಂದ್ರನ ಬಗ್ಗೆ ಮಾತಾಡಕ್ಕೆರ ಬಂದಿದ್ದ. ಹುಟ್ಟ ಕಳ್ಳಿದ್ದಂಗಿದ್ದ”
“ಅವುನ್ನ ಈ ನಿಮ್ಮಗಂಟೆ ಸಮಾರಂಭಕ್ಕೆ ಕರೆದಿದ್ಲು”
“ಕರಿಬಾರ್ದ”
“ಕಳ್ಳನಂಗಿದ್ದ ಅಂತಿ ಕರಿಬಾರ್ದ ಅಂತಿ ಯಲ್ಲಯಾ. ಆ ಹುಟ್ಟು ಸುಳ್ಳಪ್ಪ ಕ್ಯಟ್ಟಚೆಡ್ಡಿ”
“ಚೆಡ್ಡಿಲಿ ವಳ್ಳೆ ಚೆಡ್ಡಿನೂ ಇದ್ದವಾ”
“ಅವೆ ಆದ್ರೆ ಇವುನು ಮಾತ್ರ ವಿಶಪಾತಕ .ಇಂಥೊನ್ನ ಆ ಗಂಟಿ ಸಮಾರಂಬಕ್ಕೆ ಕರಿಸಿಗಂಡು ಸರಿಯಾಗಿ ಉಗಿಸಿಗಂಡ್ಳು”
“ನಾವು ಯಾರ ಪರನೂ ಮಾತಾಡಂಗಿಲ್ಲ ಸಾ. ಯಾರು ಯಾವಟೈಮಲ್ಲಿ ಬದ್ಲಾಯ್ತಾರೊ ಏನೊ”
“ಬದಲಾವಣೆ ಕಾಲದ ನಿಯಮ”
“ಅದು ಮನುಸುನ ಮನಸಿಗೂ ಅನ್ವಯಿಸ್ತದಾ”
“ಊ ಮತ್ತೆ ಕರ್ನಾಟಕದಲ್ಲಿ ಈಗ ಯಂತ ಬದಲಾವಣೆ ಆಗ್ಯದೆಗೊತ್ತ”
“ಗೊತ್ತು ಸಾ. ಈ ಡಿಕೆಶಿ, ಕುಮಾರಸ್ವಾಮಿ ಹೊಡದಾಡಿಕಂಡೆ ಸತ್ತೊಯ್ತರೆ ಅನಕಂಡಿದ್ದೆ. ಈಗ ನೋಡಿದ್ರೆ ದ್ಯಾವೇಗೌಡನ ಹಣೆಗೆ ಅಕ್ಷತೆ ಆಗ್ಯವುರೆ”
“ಅಕ್ಷತೆನೆ”
“ಊ ಸಾ. ಡಿಕೆಶಿ ಹರಸಣ ಅಕ್ಕಿ ಸೇರಿದ್ರೆ ಅಕ್ಷತೆ ಅಂದ. ಅದ ಯಾರಿಗಿಡಬೇಕು ದ್ಯಾವೇಗೌಡನಿಗೆ ತಾನೆ”
“ನಿಜಕಣಯ್ಯ”
“ಇನ್ನ ಅಹಿಂದ ಸಭೆಲಿ ಈ ಸಿದ್ದರಾಮಯ್ಯ ದ್ಯಾವೇಗೌಡರನ್ನ ಬೋದಿದ್ದ ನೋಡಿದ್ರೆ, ಇನ್ನ ಮುಗಿತು. ಈ ಜಲುಮದಲ್ಲಿ ಇವುರು ಹಿಂಗೇ ಸತ್ತೋಯ್ತರೆ ಅನ್ನಕಂಡಿದ್ದೆ. ತೀರ ಇತ್ತೀಚಿಗೆ, ಈ ಸಿದ್ದರಾಮಯ್ಯನಂತ ನೀಚ ಮುಕ್ಯಮಂತ್ರಿನ ನೋಡೇ ಇಲ್ಲ ಅಂದ ದ್ಯಾವೇಗೌಡ, ಈಗ ನೋಡಿದ್ರೆ ಜಾತ್ರೆಗೆ ರೆಡಿಯಾಗಿರೋ ಜೋಡೆತ್ತಿನಂಗೆ ಜ್ವತೆಲೆ ನಿಂತವುರೆ ಇದಕೇನೇಳ್ತಿರಿ”
“ಒಳ್ಳೆ ಬದಲಾವಣೆ”
“ಯಾಕೆ ಸಾರ್’
“ಮೋದಿ ಟೀಮಂಗೆ ಯಲ್ಲ ಒಂದಾಗಬೇಕಾಗಿದೆ”
“ಅದೇನೂ ನಿಜಸಾ. ಈ ಹಾಳು ಚೆಡ್ಡಿಗಳು ಈಗ ಏನೇಳ್ತ ಅವುರೆಗೊತ್ತೆ, ಮೋದಿ ಏನಾರ ಸೋತ್ರೆ ಆ ಪಾಕೀಸ್ತಾನದೋರು ನಮ್ಮ ಮ್ಯಾಲೆ ಬಿದ್ದು ಇಚಿಡಿ ಯಾದೇಸನೆಗೆದ್ದ ಕತ್ತರಂತೆ”
“ವಳ್ಳೆದಾಯ್ತಲ್ಲಯ್ಯ”
“ಇದೇನ್ ಸಾ ಹಿಂಗೇಳ್ತಿರಿ”
“ಪಾಕಿಸ್ತಾನ ದೂರು ಇಂಡಿಯಾಗೆದ್ದು ಕೂಡ್ಳೆ ಅದೂ ಇಂಡಿಯಾ ಆಯ್ತದಲ್ಲಯ್ಯ”
“ಅಂಗಾದ್ರೆ ಗೆದ್ಕಳ್ಳಿ ಬುಡಿ ಸಾ”
“ಥೂತ್ತೆರಿ”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...