Homeಕರ್ನಾಟಕಮೋದಿ, ಯಡಿಯೂರಪ್ಪ ಶಾಶ್ವತವಲ್ಲ - ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಮೋದಿ, ಯಡಿಯೂರಪ್ಪ ಶಾಶ್ವತವಲ್ಲ – ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

- Advertisement -
- Advertisement -

ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ವ್ಯವಸ್ಥೆಯನ್ನು, ವ್ಯಕ್ತಿಯನ್ನು ಟೀಕಿಸಿದ ಮಾತ್ರಕ್ಕೆ ಪೊಲೀಸರು ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ವಿಚಾರಣೆ ನಡೆಸಿರುವುದು ಖಂಡನೀಯ. ಯಾರೋ ಹೇಳಿದ ಮಾತ್ರಕ್ಕೆ ಹೀಗೆ ವಿಚಾರಣೆ ನಡೆಸುವುದಾದರೆ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಇರ್ತಾರಾ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಭಿವ್ಯಕ್ತಿ, ವಾಕ್ ‌ಸ್ವಾತಂತ್ರ್ಯಇದೆ. ರಾಜಕೀಯ ವ್ಯವಸ್ಥೆಯ ಕುರಿತು ರಾಜಕೀಯ ವ್ಯಕ್ತಿಗಳ ಬಗ್ಗೆ ಟೀಕೆ ಮತ್ತು ಪ್ರಶಂಸೆ ಮಾಡಲು ಹಕ್ಕು ಇದೆ. ವ್ಯವಸ್ಥೆ ಕೆಟ್ಟುಹೋಗಿರುವ ಬಗ್ಗೆ ಹಲವರಿಗೆ ನೋವಿದೆ. ಈ ಕುರಿತು ಅದು ವೇದಿಕೆಗಳಲ್ಲಿ ವ್ಯಕ್ತವಾಗುತ್ತಿದೆ. ಹಾಗೆಯೇ ಹಂಪಾ ನಾಗರಾಜಯ್ಯ ಕೂಡ ಟೀಕಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರನ್ನು ಕರೆದು ವಿಚಾರಣೆ ನಡೆಸಿರುವುದು ಸಾಹಿತಿಗಳಿಗೆ ಮಾಡಿರುವ ಅವಮಾನ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ – ಡಿ.ಕೆ. ಶಿವಕುಮಾರ್ ಟೀಕೆ

ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಂಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಸಾಹಿತ್ಯ ಸೃಷ್ಟಿಸಿದ್ದಾರೆ. ಅಂಥ ವ್ಯಕ್ತಿತ್ವವುಳ್ಳ ಅವರು ಈಗಿನ ವ್ಯವಸ್ಥೆ ಬಗ್ಗೆ ಬೇಸರದ, ನೋವಿನ ನುಡಿಗಳನ್ನಾಡಿದ್ದಾರೆ. ವ್ಯವಸ್ಥೆ ಬಗ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಹೇಳಿದ ಎಂಬ ನೆಪವೊಡ್ಡಿ ಠಾಣೆಗೆ ಕರೆಸಿ ಅವಮಾನ ಮಾಡುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

ಹಂಪನಾ ಯಾವುದೇ ಅಪರಾಧ ಮಾಡಿಲ್ಲ. ಸಾಹಿತಿಗಳು ಸಮಾಜವನ್ನು ಸೂಕ್ಷ್ಮದೃಷ್ಟಿಯಿಂದ ನೋಡುವ ಮನಸ್ಸುಳ್ಳವರು. ಅವರನ್ನು ಹೀಗೆ ಠಾಣೆಗೆ ಕರೆಸುವಂತಹ ತಪ್ಪು ಮಾಡಿದ್ದು ಕೂಡಲೇ ಸರ್ಕಾರ ಇದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 20ರಂದು ಬೆಂಗಳೂರಿನ ಕಾಂಗ್ರೆಸ್ ರೈತರ ಬೃಹತ್ ಮೆರವಣಿಗೆ ನಡೆಸಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದು ಸಹಜ ಕೂಡ. ಬಿಜೆಪಿ ಪ್ರತಿಭಟನೆಗಳಲ್ಲಿ ಇಂತಹ ಘಟನೆಗಳು ನಡೆದಿಲ್ಲವೇ? ಎಂದು ಪ್ರಶ್ನಿಸಿರುವ ರಾಜಣ್ಣ, ಸೌಮ್ಯರೆಡ್ಡಿ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಸಿಡಿಮಿಡಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಒಬ್ಬರಿಂದ ದೂರು ಪಡೆದು ಸೌಮ್ಯರೆಡ್ಡಿ ಮೇಲೆ ಕೇಸು ಹಾಕಿದ್ದಾರೆ. ಸೆಕ್ಸನ್- 323 ನೂಕಾಟ, ಸೆಕ್ಷನ್ 353 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ಮೇಲಿನವರ ಮಾತು ಕೇಳಿಕೊಂಡು ಪೊಲೀಸರು ಹೀಗೆ ಕೇಸು ಹಾಕುವುದಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಕೂತಿರ್ತಾರಾ ಎಂದು ಲೇವಡಿ ಮಾಡಿದರು.

ಹೋಂಗಾರ್ಡ್ ಯಾವ ಸರ್ಕಾರಿ ಅಧಿಕಾರಿ. ಇದು ಅರ್ಥವಾಗಬೇಕಲ್ಲವೇ ಪೊಲೀಸರಿಗೆ? ಇವರಿಗೇ ಮಾನ ಮರ್ಯಾದೆ ಇಲ್ಲ. ಸೌಮ್ಯರೆಡ್ಡಿ ಮೇಲೆ ಹಾಕಿರುವ ಕೇಸನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ವ್ಯವಸ್ಥೆಯೇ ಕಾರಣ ಆಗುತ್ತದೆ ಎಂದು ಎಚ್ಚರಿಸಿದರು.

ಕಮಲ್ ಪಂಥ್ ಇರಬಹುದು, ಮತ್ತೊಬ್ಬರು ಇರಬಹುದು. ಇವರೆಲ್ಲಾ ಏನು ತಿಳಿದುಕೊಂಡಿದ್ದಾರೆ. ಐಪಿಎಸ್ ಅಂದರೆ ಸಂವಿಧಾನ, ಕಾನೂನು ಪ್ರಕಾರ ಕೆಲಸ ಮಾಡಬೇಕು. ಯಾರೋ ಒಬ್ಬ ಕೂತ್ಕೊಂಡು ಅವನ ತೀಟೆ ತೀರಿಸಿಕೊಳ್ಳೋಕೆ ಹೇಳಿದ ಅಂತಾ ಕೆಲಸ ಮಾಡೋದಾದ್ರೆ ಅಂಥವರು ನಾಲಾಯಕ್. ಯಡಿಯೂರಪ್ಪ ಆಗಲಿ, ಮೋದಿ ಆಗಲಿ ಇಲ್ಲೇ ಇರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಬದಲಾವಣೆ ಬಯಸಿದರೆ ಅದು ಆಗ್ತದೆ. ವ್ಯವಸ್ಥೆಯಲ್ಲಿ ಜನರ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮರೆಯಬಾರದು. ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಡೈನಾಮೈಟ್‌ ಸ್ಫೋಟ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...