Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

’ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಜಾತ್ಯತೀತ ಪ್ರಜಾಪ್ರಭುತ್ವ ಇರುವವರೆಗೂ ನೀವು ಧರ್ಮ ಪಠಣಗಳನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ನೇತಾಜಿ ವಾರ್ಷಿಕೋತ್ಸವದಂದು ನಡೆದ ಕೇಂದ್ರದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ಮೊದಲು ಕೇಳಿ ಬಂದ ಜೈ ಶ್ರೀರಾಮ್ ಘೋಷಣೆಗಳಿಗೆ ವೇದಿಕೆಯಲ್ಲೇ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ. ಕೇಂದ್ರ ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಸಂಸದೆ ಮೆಹುವಾ ಮೊಯಿತ್ರಾ, “ಕೇಂದ್ರ ಸರ್ಕಾರವು ಬಹು-ನಂಬಿಕೆಯ ಪ್ರಜಾಪ್ರಭುತ್ವದ ಎಲ್ಲಾ ಪಾವಿತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಅಧಿಕೃತ ಕಾರ್ಯಕ್ರಮವೊಂದರಲ್ಲಿ ಜಾತ್ಯತೀತ ಪ್ರಜಾಪ್ರಭುತ್ವದ ಈ ನೆಲದಲ್ಲಿ ಧರ್ಮದ ಪಠಣಗಳನ್ನು ಚೀರುವುದು ಅಕ್ಷಮ್ಯ. ಬಿಜೆಪಿಯ ಅಶಿಕ್ಷಿತ/ಹುಂಬ ಜನರು ಮಾತ್ರ ಈ ರೀತಿಯ ಅಸಂಬದ್ಧತೆಯನ್ನು ಪ್ರದರ್ಶಿಸಬಲ್ಲರು’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಂಸದೆ ಮೆಹುವಾ, “ಧರ್ಮವು ಸರ್ಕಾರಕ್ಕೆ ಸಮನಾಗಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಅಥವಾ ಭಾರತವು ನಾಶವಾಗುತ್ತಿರುವ ಈ ದೊಡ್ಡ ವಿನಾಶವಾದಿ ಕೆಲಸ ನಿಲ್ಲಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ಹಿಂದೂಗಳು ಇತರ ಧರ್ಮಗಳಿಗೆ ಅಸಹಿಷ್ಣುತೆ ತೋರುವುದನ್ನು ತನ್ನ ತಂದೆ ಒಪ್ಪುತ್ತಿರಲಿಲ್ಲ ಎಂದು ನೇತಾಜಿ ಮಗಳು ಅನಿತಾ ಬೋಸ್ ಹೇಳಿದ್ದಾರೆ ಎಂದು ಮೆಹುವಾ ಹೇಳಿದ್ದಾರೆ. ತಮ್ಮ ಟ್ವೀಟ್‌ನ ಕೊನೆಯಲ್ಲಿ ಅವರು, ಜೈ ಶ್ರೀ ಸಂವಿಧಾನ್ ಎಂಬ ಮಹತ್ವದ ಘೋಷಣೆ ಹಾಕಿದ್ದಾರೆ.

ಮತ್ತೊಬ್ಬ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್, ಆ ಸಭೆಯಲ್ಲಿ ಮಮತಾ ಬ್ಯಾನರ್ಜಿಯವರ ಭಾಷಣಕ್ಕೆ ಅಡೆತಡೆ ಮಾಡಿದ್ದನ್ನು ಖಂಡಿಸಿದ್ದಾರೆ, ಅನಾಗರಿಕರಿಗೆ ಘನತೆಯನ್ನು ಕಲಿಸಲಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮಮತಾ ಅವರ ಕ್ರಮವು ತನ್ನ ಹತಾಶೆಯನ್ನು ತೋರಿಸಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯ ವರ್ಗಿಯಾ ಹೇಳಿದ್ದಾರೆ. “ಜೈ ಶ್ರೀ ರಾಮ್ ಜಪಿಸುವುದರಲ್ಲಿ ಏನು ಸಮಸ್ಯೆ ಇದೆ ಮತ್ತು ಮಮತಾ ಅದರ ಬಗ್ಗೆ ಏಕೆ ಸಿಟ್ಟಾಗುತ್ತಾರೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ. ಮಮತಾ ಅವರು ಎದ್ದುನಿಂತಾಗ ಅವರ ಗೌರವಾರ್ಥವಾಗಿ ಘೋಷಣೆ ಕೂಗಲಾಗಿದೆ ಎಂದು ನಾನು ಭಾವಿಸುತ್ತೇನೆ. ಘೋಷಣೆಯಿಂದಾಗಿ ವೇದಿಕೆಯಿಂದ ಹೊರನಡೆಯುವುದು ಹತಾಶೆಯನ್ನು ಸೂಚಿಸುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವೇಗ ಹೆಚ್ಚುತ್ತಿದೆ. ಉನ್ನತ ನಾಯಕರು, ಮಂತ್ರಿಗಳು ತೃಣಮೂಲ ಪಕ್ಷವನ್ನು ತೊರೆದಿದ್ದು, ಪಕ್ಷದೊಳಗಿನ ಬಿರುಕುಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ. ಈ ಪಕ್ಷಾಂತರ ಬಿಜೆಪಿಯಲ್ಲೂ ಸಮಸ್ಯೆಯನ್ನು ತಂದಿದೆ.

ನೇತಾಜಿ ಜನ್ಮದಿನಾಚರಣೆಯು ಬಿಜೆಪಿ ಮತ್ತು ತೃಣಮೂಲ ನಡುವೆ ಘರ್ಷಣೆಯ ಹಂತ ತಲುಪಿದೆ. ಈ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಈ ಕಾರ್ಯಕ್ರಮದಲ್ಲಿ ಜಂಟಿಯಾಗಿ ಕಾಣಿಸಿಕೊಂಡಿರುವುದು ಆಶ್ಚರ್ಯಕರವಾಗಿತ್ತು! ಆದರೆ ಮಮತಾ ಅವರು ತಮಗೆ ಅವಮಾನಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಭಾಷಣ ಮಾಡಲು ನಿರಾಕರಿಸಿ ವೇದಿಕೆಯಿಂದ ಹೊರನಡೆದಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...