Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

’ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಜಾತ್ಯತೀತ ಪ್ರಜಾಪ್ರಭುತ್ವ ಇರುವವರೆಗೂ ನೀವು ಧರ್ಮ ಪಠಣಗಳನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ನೇತಾಜಿ ವಾರ್ಷಿಕೋತ್ಸವದಂದು ನಡೆದ ಕೇಂದ್ರದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ಮೊದಲು ಕೇಳಿ ಬಂದ ಜೈ ಶ್ರೀರಾಮ್ ಘೋಷಣೆಗಳಿಗೆ ವೇದಿಕೆಯಲ್ಲೇ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ. ಕೇಂದ್ರ ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಸಂಸದೆ ಮೆಹುವಾ ಮೊಯಿತ್ರಾ, “ಕೇಂದ್ರ ಸರ್ಕಾರವು ಬಹು-ನಂಬಿಕೆಯ ಪ್ರಜಾಪ್ರಭುತ್ವದ ಎಲ್ಲಾ ಪಾವಿತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಅಧಿಕೃತ ಕಾರ್ಯಕ್ರಮವೊಂದರಲ್ಲಿ ಜಾತ್ಯತೀತ ಪ್ರಜಾಪ್ರಭುತ್ವದ ಈ ನೆಲದಲ್ಲಿ ಧರ್ಮದ ಪಠಣಗಳನ್ನು ಚೀರುವುದು ಅಕ್ಷಮ್ಯ. ಬಿಜೆಪಿಯ ಅಶಿಕ್ಷಿತ/ಹುಂಬ ಜನರು ಮಾತ್ರ ಈ ರೀತಿಯ ಅಸಂಬದ್ಧತೆಯನ್ನು ಪ್ರದರ್ಶಿಸಬಲ್ಲರು’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಂಸದೆ ಮೆಹುವಾ, “ಧರ್ಮವು ಸರ್ಕಾರಕ್ಕೆ ಸಮನಾಗಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಅಥವಾ ಭಾರತವು ನಾಶವಾಗುತ್ತಿರುವ ಈ ದೊಡ್ಡ ವಿನಾಶವಾದಿ ಕೆಲಸ ನಿಲ್ಲಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ಹಿಂದೂಗಳು ಇತರ ಧರ್ಮಗಳಿಗೆ ಅಸಹಿಷ್ಣುತೆ ತೋರುವುದನ್ನು ತನ್ನ ತಂದೆ ಒಪ್ಪುತ್ತಿರಲಿಲ್ಲ ಎಂದು ನೇತಾಜಿ ಮಗಳು ಅನಿತಾ ಬೋಸ್ ಹೇಳಿದ್ದಾರೆ ಎಂದು ಮೆಹುವಾ ಹೇಳಿದ್ದಾರೆ. ತಮ್ಮ ಟ್ವೀಟ್‌ನ ಕೊನೆಯಲ್ಲಿ ಅವರು, ಜೈ ಶ್ರೀ ಸಂವಿಧಾನ್ ಎಂಬ ಮಹತ್ವದ ಘೋಷಣೆ ಹಾಕಿದ್ದಾರೆ.

ಮತ್ತೊಬ್ಬ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್, ಆ ಸಭೆಯಲ್ಲಿ ಮಮತಾ ಬ್ಯಾನರ್ಜಿಯವರ ಭಾಷಣಕ್ಕೆ ಅಡೆತಡೆ ಮಾಡಿದ್ದನ್ನು ಖಂಡಿಸಿದ್ದಾರೆ, ಅನಾಗರಿಕರಿಗೆ ಘನತೆಯನ್ನು ಕಲಿಸಲಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮಮತಾ ಅವರ ಕ್ರಮವು ತನ್ನ ಹತಾಶೆಯನ್ನು ತೋರಿಸಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯ ವರ್ಗಿಯಾ ಹೇಳಿದ್ದಾರೆ. “ಜೈ ಶ್ರೀ ರಾಮ್ ಜಪಿಸುವುದರಲ್ಲಿ ಏನು ಸಮಸ್ಯೆ ಇದೆ ಮತ್ತು ಮಮತಾ ಅದರ ಬಗ್ಗೆ ಏಕೆ ಸಿಟ್ಟಾಗುತ್ತಾರೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ. ಮಮತಾ ಅವರು ಎದ್ದುನಿಂತಾಗ ಅವರ ಗೌರವಾರ್ಥವಾಗಿ ಘೋಷಣೆ ಕೂಗಲಾಗಿದೆ ಎಂದು ನಾನು ಭಾವಿಸುತ್ತೇನೆ. ಘೋಷಣೆಯಿಂದಾಗಿ ವೇದಿಕೆಯಿಂದ ಹೊರನಡೆಯುವುದು ಹತಾಶೆಯನ್ನು ಸೂಚಿಸುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವೇಗ ಹೆಚ್ಚುತ್ತಿದೆ. ಉನ್ನತ ನಾಯಕರು, ಮಂತ್ರಿಗಳು ತೃಣಮೂಲ ಪಕ್ಷವನ್ನು ತೊರೆದಿದ್ದು, ಪಕ್ಷದೊಳಗಿನ ಬಿರುಕುಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ. ಈ ಪಕ್ಷಾಂತರ ಬಿಜೆಪಿಯಲ್ಲೂ ಸಮಸ್ಯೆಯನ್ನು ತಂದಿದೆ.

ನೇತಾಜಿ ಜನ್ಮದಿನಾಚರಣೆಯು ಬಿಜೆಪಿ ಮತ್ತು ತೃಣಮೂಲ ನಡುವೆ ಘರ್ಷಣೆಯ ಹಂತ ತಲುಪಿದೆ. ಈ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಈ ಕಾರ್ಯಕ್ರಮದಲ್ಲಿ ಜಂಟಿಯಾಗಿ ಕಾಣಿಸಿಕೊಂಡಿರುವುದು ಆಶ್ಚರ್ಯಕರವಾಗಿತ್ತು! ಆದರೆ ಮಮತಾ ಅವರು ತಮಗೆ ಅವಮಾನಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಭಾಷಣ ಮಾಡಲು ನಿರಾಕರಿಸಿ ವೇದಿಕೆಯಿಂದ ಹೊರನಡೆದಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....