Homeರೈತ ಹೋರಾಟಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಕಾರ್ಮಿಕ ಒಕ್ಕೂಟದ ಕೆ.ವಿ ಭಟ್, ರೈತ ಮುಖಂಡರಾದ ಜೆ.ಎಂ ವೀರಸಂಗಯ್ಯ ಮುಂತಾದವರು ಭಾಗವಹಿಸಿ ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಸ ಮಾಲಿಪಾಟೀಲ್ ಮಾತನಾಡಿ “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ಮಾವಳ್ಳಿ ಶಂಕರ್‌ರವರು ಮಾತನಾಡಿ “ನಾವು ಈಗಾಗಲೇ ಬೆಂಗಳೂರು ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂಸೆಗೆ ಅವಕಾಶ ಕೊಡುವುದಿಲ್ಲ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಕುದುಂಟು ಮಾಡುವುದಿಲ್ಲ ಎಂದು ಸಭೆಯಲ್ಲಿ ನಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲಾ ರೈತರು ನಗರದ ರೈಲ್ವೇ ಸ್ಟೇಷನ್ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸುತ್ತೇವೆ. ಅಲ್ಲಿ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರು ಧ್ವಜಾರೋಹಣ ನಡೆಸಲಿದ್ದಾರೆ ಎಂದು ತಿಳಿಸಿದ್ದೇವೆ. ಆದರೆ ಪೊಲೀಸರು ಟ್ರ್ಯಾಕ್ಟರ್ ತಡೆದರೆ, ಡೀಸೆಲ್ ಹಾಕಲು ನಿರಾಕರಿಸಿರುತ್ತಿರುವುದನ್ನು ನೋಡಿದರೆ ನಾಗರೀಕ ಹೋರಾಟವನ್ನು ಸರ್ಕಾರ ದಮನ ಮಾಡುತ್ತಿರುವುದು ಕಂಡುಬಂದಿದೆ. ನಾವು ಶಾಂತಿಯುತವಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಜ. 26ರಂದು ಬೆಳಗ್ಗೆ 9 ಗಂಟೆಗೆ ಸೇರಲಿದ್ದಾರೆ.

ಇಲ್ಲಿಂದ ಹೊರಡಲಿರುವ ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ. ಉದ್ಯಾನದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಜಾರಿಗೊಳಿಸುತ್ತಿರುವ ಪಟ್ಟು ಹಿಡಿದಿರುವ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚೆ ನಡೆಯಲಿವೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್ ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸಂಜೆ 4 ಗಂಟೆಗೆ ಐಜಿಪಿಯವರು ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೆ ಇಂದು ಸಂಜೆಯಿಂದಲೇ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...