Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...