Homeಮುಖಪುಟಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಈಗಾಗಲೇ ಲಕ್ಷಾಂತರ ಜನರು ದೆಹಲಿ ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ- ದರ್ಶನ್ ಪಾಲ್

- Advertisement -
- Advertisement -

ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ಮುನ್ನಾ ದಿನ ದೆಹಲಿಯ ರೈತ ಮುಖಂಡರು ತಮ್ಮ ಹೋರಾಟದ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ಪಾರ್ಲಿಮೆಂಟ್‌ಗೆ ಪಾದಯಾತ್ರೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಘೋಷಿಸಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಅಧ್ಯಕ್ಷ ದರ್ಶನ್ ಪಾಲ್ ಮಾತನಾಡಿ ” ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ.

“ನಾಳೆ ನಾವು ದೆಹಲಿಯಲ್ಲಿ ರೈತ-ಟ್ರಾಕ್ಟರ್‌ ಪರೇಡ್‌ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಎರಡು ತಿಂಗಳುಗಳಿಂದ, ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಸುತ್ತಲೂ ಆರು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಲಕ್ಷಾಂತರ ಜನರು ದೆಹಲಿಯನ್ನು ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಗಡಿಗಳಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಇದುವರೆಗೂ ಗಮನ ಸೆಳೆಯುವ ವಿಭಿನ್ನ ಹೋರಾಟವನ್ನು ನಡೆಸಿದ್ದಾರೆ. ಟೋಲ್‌ ಪ್ಲಾಜಾಗಳಿಗೆ ಮುತ್ತಿಗೆ ಹಾಕಿ ವಾಹನಗಳು ಉಚಿತವಾಗಿ ಸಂಚರಿಸುವಂತೆ ಮಾಡುವುದು, ಹೆದ್ದಾರಿ ತಡೆ ನಡೆಸುವುದು, ದೇಶವ್ಯಾಪಿ ಬಂದ್‌ಗೆ ಕರೆ ನೀಡುವುದು ಮಾಡಿದ್ದಾರೆ. ತಮ್ಮ ಹೋರಾಟದ 2 ತಿಂಗಳ ಅಂಗವಾಗಿ ಜನವರಿ 26 ರಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇದರ ಮುಂದಿನ ನಡೆಯಾಗಿ ಪಾರ್ಲಿಮೆಂಟ್ ಚಲೋ ನಡೆಯಲಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ನಾಳೆಯ ಟ್ರ್ಯಾಕ್ಟರ್ ರ್ಯಾಲಿಯಂತೂ ವಿಶ್ವದ ಗಮನ ಸೆಳೆದಿದೆ. ಈ ರ್ಯಾಲಿ ತಡೆಯಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಶತಾಯ-ಗತಾಯ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ನಾಳೆ ರೈತರು ಶಾಂತಿಯುತವಾಗಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಹೋರಾಟವನ್ನು ವಿಶ್ವಕ್ಕೆ ಸಾರಲು ಮುಂದಾಗಿದ್ದಾರೆ.

ಗಣರಾಜ್ಯೋತ್ಸದ ದಿನ ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುತ್ತಿರುವಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಗಣತಂತ್ರ ಪರೇಡ್, ಟ್ರಾಕ್ಟರ್ ಪರೇಡ್‌ ಹೆಸರಿನಲ್ಲಿ ರೈತರ ಬೃಹತ್‌ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಂಘಟಿಸಲಾಗುತ್ತಿರುವ ಈ ಹೋರಾಟಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಅಭಿನಂದಿಸಿದೆ.


ಇದನ್ನೂ ಓದಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...