Homeಮುಖಪುಟಕಂಗನಾ ಭೇಟಿಗೆ ರಾಜ್ಯಪಾಲರಿಗೆ ಸಮಯವಿದೆ, ರೈತರ ಭೇಟಿಗಿಲ್ಲ: ಶರದ್ ಪವಾರ್ ಟೀಕೆ

ಕಂಗನಾ ಭೇಟಿಗೆ ರಾಜ್ಯಪಾಲರಿಗೆ ಸಮಯವಿದೆ, ರೈತರ ಭೇಟಿಗಿಲ್ಲ: ಶರದ್ ಪವಾರ್ ಟೀಕೆ

ಸಂಸತ್ತಿನಲ್ಲಿ ಹೆಚ್ಚಿನ ಚರ್ಚೆಯಿಲ್ಲದೇ ಮೂರು ಕೃಷಿ ಕಾಯ್ದೆಗಳನ್ನು ಅಂಗೀಕರಿಸಲಾಗಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಟೀಕಿಸಿದ್ದಾರೆ.

- Advertisement -
- Advertisement -

ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ನಾಳೆಯ ಉದ್ದೇಶಿತ ರ‍್ಯಾಲಿಗೆ ಬೆಂಬಲವಾಗಿ ಮುಂಬೈನ ಅಜಾದ್ ಮೈದಾನದಲ್ಲಿ ಸೇರಿರುವ ಬೃಹತ್ ರೈತ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, ಇಲ್ಲಿನ ರಾಜ್ಯಪಾಲರಿಗೆ ಕಂಗನಾ ರಾಣಾವತ್ ಅವರನ್ನು ಭೇಟಿಯಾಗಲು ಸಮಯವಿದೆ. ರೈತರನ್ನು ಭೇಟಿಯಾಗಲು ಸಮಯವಿಲ್ಲ’ ಎಂದು ಆರೋಪಿಸಿದ್ದಾರೆ.

‘ಪಂಜಾಬ್ ಏನು ಪಾಕಿಸ್ತಾನವಾ? ಅದು ನಮ್ಮದೇ ದೇಶದ ರಾಜ್ಯ. ಪ್ರತಿಭಟಿಸುತ್ತಿರುವ ಪಂಜಾಬ್, ಹರಿಯಾಣ, ಉತ್ತರಪ್ರದೇಶ, ರಾಜಸ್ಥಾನ್ ಮತ್ತು ಇತರ ರಾಜ್ಯಗಳ ರೈತರನ್ನು ಪಂಜಾಬಿ ರೈತರು ಎಂದು ಕೇಂದ್ರ ಕರೆಯುತ್ತಿದೆ. ಪಂಜಾಬ್ ಏನೂ ಪಾಕಿಸ್ತಾನ ಅಲ್ಲವಲ್ಲ’ ಎಂದು ಶರದ್ ಪವಾರ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸತ್ತಿನಲ್ಲಿ ಹಲವಾರು ಹಿರಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ದೊಡ್ಡ ಚರ್ಚೆಗೆ ಆಗ್ರಹಿಸಿದರೂ ಮೋದಿ ಸರ್ಕಾರ ಅದನ್ನು ಮನ್ನಿಸಲಿಲ್ಲ. ಎಲ್ಲ ಪಕ್ಷಗಳ ಸದಸ್ಯರು ಇರುವ ಸೆಲೆಕ್ಟ್ ಕಮೀಟಿ ಈ ಕಾಯ್ದೆಗಳನ್ನು ಪರಿಶೀಲಿಸಲು ಅವಕಾಶ ನೀಡಿ ಎಂದೆವು. ಆದರೆ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸಿ ಕಾಯ್ದೆಗಳನ್ನು ಅಂಗೀಕಾರ ಮಾಡಿತು’ ಎಂದು ಅವರು ಹೇಳಿದರು.

ಮಹಾರಾಷ್ಟ್ರದ 21ಕ್ಕೂ ಹೆಚ್ಚು ಜಿಲ್ಲೆಗಳಿಂದ ಮುಂಬೈ ಅಜಾದ್ ಮೈದಾನಕ್ಕೆ ಸಾವಿರಾರು ರೈತರು ಆಗಮಿಸಿದ್ದಾರೆ. ಜನವರಿ 24ರಿಂದ ರೈತರ ವಿವಿಧ ತಂಡಗಳು ಆಗಮಿಸುತ್ತಿದ್ದು, ಜ. 26ರಂದು ಬೃಹತ್ ರೈತ ಸಮಾವೇಶ ನಡೆಯಲಿದೆ.

ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ಮುನ್ನಾ ದಿನ ದೆಹಲಿಯ ರೈತ ಮುಖಂಡರು ತಮ್ಮ ಹೋರಾಟದ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ಪಾರ್ಲಿಮೆಂಟ್‌ಗೆ ಪಾದಯಾತ್ರೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಘೋಷಿಸಿದ್ದಾರೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...