Homeಮುಖಪುಟರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

"ಇಷ್ಟು ದಿನ ಅನ್ನ ಹಾಕಿದ ರೈತರಿಗೆ ಹೋರಾಟದ ದಿನ ನಾವು ಊಟ ನೀಡುತ್ತಿದ್ದೇವೆ. ಇದು ನಮ್ಮ ಕರ್ತವ್ಯ. ನಾವು ರೈತರ ಹೋರಾಟದೊಂದಿಗೆ ಇದ್ದೇವೆ"

- Advertisement -
- Advertisement -

ಇಂದು ದೇಶಾದ್ಯಂತ ಐತಿಹಾಸಿಕ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತಿದೆ. ದೆಹಲಿಯಲ್ಲಾಗಲೇ ರೈತರು ಬ್ಯಾರಿಕೇಡ್‌ಗಳನ್ನು ಮುರಿದು ಶಾಂತಿಯುತ ಪರೇಡ್ ಶುರು ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿಯೂ ಜನ ಗಣರಾಜ್ಯೋತ್ಸವಕ್ಕೆ ಭರ್ಜರಿ ಸಿದ್ದತೆ ನಡೆದಿದ್ದು ಸಾವಿರಾರು ಜನ ರಾಜಧಾನಿಯತ್ತ ಮೆರವಣಿಗೆ ಹೊರಟಿದ್ದಾರೆ. ಅವರಿಗೆಲ್ಲರಿಗೂ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಟ್ರಾನ್ಸ್ ಜೆಂಡರ್ ಸಂಘಟನೆಗಳು ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿವೆ.

ಇಂದು ಬೆಳಿಗ್ಗೆಯೇ ರೈಲ್ವೇ ನಿಲ್ದಾಣದ ಬಳಿ ಜಮಾಯಿಸಿರುವ ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆಗಳು ಹೋರಾಟಕ್ಕಾಗಿ ಆಗಮಿಸುವ 10,000 ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿವೆ. ಆ ಮೂಲಕ “ಇಷ್ಟು ದಿನ ಅನ್ನ ಹಾಕಿದ ರೈತರಿಗೆ ಹೋರಾಟದ ದಿನ ನಾವು ಊಟ ನೀಡುತ್ತಿದ್ದೇವೆ. ಇದು ನಮ್ಮ ಕರ್ತವ್ಯ. ನಾವು ರೈತರ ಹೋರಾಟದೊಂದಿಗೆ ಇದ್ದೇವೆ” ಎಂದು ಸಾರಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ವೀಣಾ ಮಾತನಾಡಿ “ಇಂದು ನಾವು ಜನ ಗಣರಾಜ್ಯೋತ್ಸವ ಮಾಡುತ್ತಿದ್ದೇವೆ. ಇಂದು ದೇಶದಲ್ಲಿನ ರೈತರ ಪರಿಸ್ಥಿತಿ ನೋಡಿ ನಮಗೆ ದಿಗ್ಭ್ರಮೆಯಾಗಿದೆ. ಇಂದು ನಾವೆಲ್ಲ ಜೀವಂತವಾಗಿದ್ದೇವೆ ಎಂದರೆ ಅದಕ್ಕೆ ರೈತರೇ ಕಾರಣ. ಅಂತಹ ರೈತರ ಮೇಲೆ ಈ ಕ್ರೂರ ಬಿಜೆಪಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಅನ್ನ ನೀಡುವ ರೈತರ ಮೇಲೆ ಕೇಂದ್ರ ಸರ್ಕಾರ ಕಾಲಿನಿಂದ ಒದೆಯುತ್ತಿದೆ. ಅಂತಹ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಲು ನಾವು ಹೋರಾಟಕ್ಕೆ ಬಂದಿದ್ದೇವೆ. ಹೋರಾಟಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಬೆಂಬಲವಿದೆ ಎಂದು ತಿಳಿಸಲು ಹತ್ತು ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದೇವೆ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಸಾರುತ್ತಿದ್ದೇವೆ” ಎಂದಿದ್ದಾರೆ.

ಇಂದು ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಸೇರಲಿದ್ದಾರೆ. ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...