Homeಮುಖಪುಟರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನನ್ನು ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಇಂದು ಆಯೋಜಿಸಿದ್ದ ಟ್ರ್ಯಾಕ್ಟರ್​ ರ‍್ಯಾಲಿಗೆ ಕೊನೆಗೂ ಪೊಲೀಸರು ಅನುಮತಿ ನೀಡಿದ್ದಾರೆ. ಪರಿಣಾಮ ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಮಾದಾವರ ಮೈದಾನದ ಬಳಿ ಭಾರತ ಬಾವುಟದ ಜೊತೆಗೆ ರೌಂಡ್ ಹಾಕುವ ಮೂಲಕ ಪೊಲೀಸರ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದರು. ಆದರೆ, ಮಧ್ಯಾಹ್ನ 1 ಗಂಟೆಯ ವೇಳೆಗೆ ಟ್ರ್ಯಾಕ್ಟರ್​ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ್ದಾರೆ. ಪೊಲೀಸರು ಅನುಮತಿ ನೀಡುತ್ತಿದ್ದಂತೆ  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ವಾಹನಗಳು ಮಾದಾವರದಿಂದ ಇದೀಗ ಪೆರೇಡ್ ಆರಂಭಿಸಿವೆ. ಮತ್ತೊಂದೆಡೆ ರೈತ ಮುಖಂಡ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಮೈಸೂರು ರಸ್ತೆ ಮೂಲಕವೂ ರೈತರು 30ಕ್ಕೂ ಹೆಚ್ಚು ಟ್ರ್ಯಾಕ್ಟರ್​ ಜೊತೆಗೆ ಈಗಾಗಲೇ ಬೆಂಗಳೂರು ಪ್ರವೇಶಿಸಿದ್ದಾರೆ.

ಮಾದಾವರ ಮತ್ತು ಮೈಸೂರು ರಸ್ತೆಯ ರ‍್ಯಾಲಿಯಲ್ಲಿ ಸಾವಿರಾರು ಸಂಖ್ಯೆಯ ರೈತರು, ಐನೂರಕ್ಕೂ ಹೆಚ್ಚು ರೈತ ವಾಹನಗಳು ಭಾಗಿಯಾಗಿದ್ದು, ರೈತರಿಗೆ ದಲಿತ, ಕಾರ್ಮಿಕ, ಕನ್ನಡ, ಮಹಿಳಾ ಸಂಘಟನೆಗಳು ಸಾಥ್ ನೀಡಿವೆ. ಪೆರೇಡ್ ಮುಂಭಾಗದಲ್ಲಿ ಟ್ರಾಕ್ಟರ್, ಆನಂತರ ಕಾರು, ಟೆಂಪೋ, ಗೂಡ್ಸ್ ಗಾಡಿ ಆನಂತರ ಹೋರಾಟಗಾರರಿರುವ ಬಸ್​ಗಳು ಸಾಲಾಗಿ ಮೆರವಣಿಗೆ ಹೊರಟಿದ್ದು, ಈ ಮೆರವಣಿಗೆ ಶೀಘ್ರದಲ್ಲೇ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಹಾಗೂ ಅಲ್ಲಿಂದ ಫ್ರೀಡಂ ಪಾರ್ಕ್​ಗೆ ತಲುಪಲಿದೆ ಎನ್ನಲಾಗುತ್ತಿದೆ.

ಇದಲ್ಲದೆ, ಹೊಸಕೋಟೆ ಮೂಲಕವೂ ರೈತರು ತಮ್ಮ ವಾಹನಗಳ ಮೂಲಕ ಬೆಂಗಳೂರು ಪ್ರವೇಶಿಸುತ್ತಿದ್ದಾರೆ. ಹೀಗಾಗಿ ಹೊಸಕೋಟೆ ಟೋಲ್ ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಬೇಟಿ ನೀಡಿ ರೈತರ ರ‍್ಯಾಲಿ ಕುರಿತು ಮಾಹಿತಿ ಪಡೆದಿದ್ದಾರೆ. ಡಿಸಿಪಿ ದೇವರಾಜ್, ಗ್ರಾಮಾಂತರ ಜಿಲ್ಲೆ ಎಎಸ್ಪಿ ಲಕ್ಷ್ಮೀ ಗಣೇಶ್ ಸ್ಥಳದಲ್ಲಿ ಭದ್ರತೆ ಹೊಣೆ ಹೊತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.

ಇನ್ನೂ ನಗರಕ್ಕೆ ರೈತರ ನೂರಾರು ವಾಹನಗಳ ಪ್ರವೇಶದಿಂದಾಗಿ ಮೈಸೂರು ರಸ್ತೆ, ನೈಸ್ ರೋಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗುತ್ತಿದೆ. ಈ ಹೋರಾಟ ಮತ್ತು ರ‍್ಯಾಲಿ ಅಂತಿಮವಾಗಿ ಫ್ರೀಂಡಂ ಪಾರ್ಕ್​ ಬಳಿ ಜಮಾಯಿಸಲಿದ್ದು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಯಲಿದೆ ಎಂದು ರೈತ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಬಿಗಿ ಭದ್ರತೆ; ರೈತ ಹೋರಾಟಕ್ಕೆ ಬೆದರಿತೇ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...